ಪ್ರಸಾದ್ ಲಕ್ಕೂರು
ಚಾಮರಾಜನಗರ: ಕುಡಿಯುವ ನೀರು ಪರೀಕ್ಷಿಸಿ ಜನರಿಗೆ ಶುದ್ಧ ನೀರು ಪೂರೈಸಲು ನಿರ್ಮಿಸುತ್ತಿರುವ ಜಿಲ್ಲಾ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರೋಂಗಾಲಯದ ಕಟ್ಟಡ ಕಾಮಗಾರಿ ಬಹುತೇಕ ಮುಕ್ತಾಯ ಹಂತದಲ್ಲಿದ್ದು, ಮುಂದಿನ ವರ್ಷದ ಜನವರಿುಂಲ್ಲಿ ಉದ್ಘಾಟನೆ ಭಾಗ್ಯ ದೊರಕಲಿದೆ.
ನಗರದ ನ್ಯಾಯಾಲಯ ರಸ್ತೆ ಬದಿಯಲ್ಲಿರುವ ಜಿಲ್ಲಾ ಪಂಚಾಯಿತಿಯ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಾಲಯ ಹಿಂಭಾಗ ಪ್ರೋಂಗಾಲಯದ ಕಟ್ಟಡ ಕಾಮಗಾರಿ ಭರದಿಂದ ಸಾಗಿದೆ. ಶೇ.೮೫ರಷ್ಟು ಕಾಮಗಾರಿ ಮುಕ್ತಾಯವಾಗಿದ್ದು, ಬಣ್ಣ ಬಳಿಯುವುದು ಮತ್ತು ಟೈಲ್ಸ್ ಅಳವಡಿಕೆ ಕಾರ್ಯ ಬಾಕಿಯಿದೆ.
ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಉಸ್ತುವಾರಿಯಲ್ಲಿ ೫೦.೮೮ ಲಕ್ಷ ರೂ.ಅಂದಾಜು ವೆಚ್ಚದ ಈ ಕಾಮಗಾರಿಯನ್ನು ಗುತ್ತಿಗೆದಾರ ಎಂ.ಎಸ್.ವಾದಯ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಫೆಬ್ರುವರಿಯಲ್ಲಿ ಕಾಮಗಾರಿ ಆರಂಭವಾಗಿದ್ದು, ಆಗಸ್ಟ್ನಲ್ಲಿ ಮುಕ್ತಾಯ ಆಗಬೇಕಿತ್ತು. ಸತತ ಮಳೆ ಹಾಗೂ ಇತರೆ ಕಾರಣಗಳಿಂದ ೩ ತಿಂಗಳು ಮುಂದೂಡಲಾಗಿದೆ.
ನಗರದಲ್ಲಿ ಜಿಲ್ಲಾ ಮಟ್ಟದ ಮತ್ತು ಕೊಳ್ಳೇಗಾಲದಲ್ಲಿ ತಾಲ್ಲೂಕು ಮಟ್ಟದ ಪ್ರಯೋಗಾಲಯ ನಿರ್ಮಾಣ ಕಾರ್ಯ ಚುರುಕುಗೊಂಡಿದೆ. ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲ್ಲೂಕುಗಳ ೩೪ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳ ನೀರಿನ ಮಾದರಿಗಳನ್ನು ವರ್ಷಕ್ಕೆ ೨ ಬಾರಿ (ಮಳೆ ಪೂರ್ವ ಮತ್ತು ನಂತರ) ಸಂಗ್ರಹಿಸಿ ನಗರದಲ್ಲಿರುವ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಲಾಗುತ್ತದೆ.
ನೀರು ಕುಡಿಯಲು ಯೋಗ್ಯವಾಗಿದೆಯೇ, ಪ್ಲೋರೈಡ್ ಅಂಶ ಯಾವ ಪ್ರಮಾಣದಲ್ಲಿದೆ. ಗಡಸು ನೀರು ಇರಬಹುದೆ, ಏನಾದರೂ ಕಲುಷಿತವಾಗಿದೆಯೇ ಎಂಬುದರ ಕುರಿತು ಪರೀಕ್ಷೆ ನಡೆಸಿ ವರದಿ ಸಿದ್ಧಪಡಿಸಲಾಗುವುದು. ಸಂಬಂಧಪಟ್ಟ ಗುಂಡ್ಲುಪೇಟೆ ಮತ್ತು ಚಾ.ನಗರದ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ಗಳಿಗೆ ವರದಿ ಸಲ್ಲಿಕೆ ಮಾಡಲಾಗುತ್ತದೆ.
ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಅಧಿಕಾರಿಗಳಿಗೆ ನೀರಿನ ಸ್ಥಿತಿಗತಿಯ ಬಗ್ಗೆ ಎಇಇಗಳು ತಿಳಿಸುತ್ತಾರೆ. ಕುಡಿಯಲು ಯೋಗ್ಯವಲ್ಲದ ನೀರಿದ್ದರೆ ಪರ್ಯಾಯ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಲಿದ್ದಾರೆ ಎಂದು ಪ್ರಯೋಗಾಲಯದ ಕಿರಿಯ ನೀರು ಪರಿವೀಕ್ಷಕ ಅನಿಲಕುವಾರ್ ತಿಳಿಸಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…