ಕಾರು ಅಪಘಾತಕ್ಕೊಳಗಾಗಿ ಚೇತರಿಸಿಕೊಂಡ ಪ್ರಧಾನಿ ಮೋದಿ ಸಹೋದರನ ಪ್ರತಿಕ್ರಿಯೆ
ಮೈಸೂರು: ಇಲ್ಲಿನ ಜನತೆ ಕಮಾಂಡೋಗಳ ರೀತಿಯಲ್ಲಿ ಬಂದು ನಮ್ಮನ್ನು ಆಸ್ಪತ್ರೆಗೆ ಸೇರಿಸಿದರು. ಇಲ್ಲಿ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಿದರು. ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ವಿರೋಧ ಪಕ್ಷದವರೂ ಸಹ ಬಂದು ಧೈರ್ಯ ತುಂಬಿದ್ದಾರೆ. ಮೈಸೂರಿನ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಅವರ ನುಡಿ. ಕಾರು ಅಪಘಾತವಾದ ತಕ್ಷಣ ನಮ್ಮನ್ನು ಆಸ್ಪತ್ರೆಗೆ ಸೇರಿಸಲು ಕಾಳಜಿ ತೋರಿದ ಮೈಸೂರಿನ ಜನತೆಗೆ ಆಭಾರಿ ಎಂದು ಅವರು ಧನ್ಯವಾದ ಸಲ್ಲಿಸಿದರು.
ಪ್ರಹ್ಲಾದ್ ಮೋದಿ ಮತ್ತು ಕುಟುಂಬಸ್ಥರು ಸಂಚರಿಸುತ್ತಿದ್ದ ಕಾರು ಮಂಗಳವಾರ ಮೈಸೂರಿನ ಕಡಕೋಳ ಬಳಿ ಅಪಘಾತಕ್ಕೀಡಾಗಿ ಐವರು ಆಸ್ಪತ್ರೆಗೆ ದಾಖಲಾಗಿದ್ದರು. ಜೆಎಸ್ ಎಸ್ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪಘಾತದಲ್ಲಿ ಚಾಲಕನದ್ದು ತಪ್ಪಿಲ್ಲ. ಈ ಕಾರು ನನ್ನ ಸ್ನೇಹಿತ ರಾಜಶೇಖರ್ ಅವರಿಗೆ ಸೇರಿದ್ದು. ನಾನು ಇಲ್ಲಿಗೆ ಬಂದಾಗ ಅವರ ಕಾರನ್ನೇ ಉಪಯೋಗಿಸಿಕೊಳ್ಳುತ್ತಿದ್ದೆ. ನಿನ್ನೆ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಾಗ ಕಾರ್ ನಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದ್ದು, ನಾವೆಲ್ಲ ಸುರಕ್ಷಿತವಾಗಿದ್ದೇ ವೆ ಎಂದು ಸ್ಪಷ್ಟಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ತಮ್ಮ ಕಾರ್ಯದೊತ್ತಡಗಳ ನಡುವೆಯೂ ನಮಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ನಾವು ಚೆನ್ನಾಗಿದ್ದೇ ವೆ ಎಂದು ತಿಳಿಸಿದ್ದೇವೆ ಎಂದರು. ಬೆಂಗಳೂರಿನ ನಮ್ಮ ಸ್ನೇ ಹಿತನ ಎರಡು ಕಾರಿನಲ್ಲಿ ನಾನು ಮತ್ತು ನನ್ನ ಕುಟುಂಬದವರು ಬಂಡೀಪುರಕ್ಕೆ ಹೊರಟಿದ್ದೆವು.ನಾವಿದ್ದ ಕಾರಿನಲ್ಲಿ ಮಗ ಮೇಹುಲ್ ಪ್ರಹ್ಲಾದ್ ಮೋದಿ(40) ಮತ್ತು ಸೊಸೆ ಜಿಂದಾಲ್ ಮೋದಿ (35), ಮೊಮ್ಮಗ ಮೇನಥ್ ಮೇಹುಲ್ ಮೋದಿ (6), ಡ್ರೈವರ್ ಸತ್ಯನಾರಾಯಣ(46) ಸೇರಿ ಐದು ಜನರಿದ್ದೆವು. ಎಲ್ಲರೂ ಈಗ ಚೇತರಿಸಿಕೊಂಡಿದ್ದೇವೆ ಎಂದರು.
ಕರ್ನಾಟಕದಲ್ಲೂ ನಮ್ಮ ಪರಿವಾರ..
ಮಂಗಳವಾರ ಅಪಘಾ ತ ಆದ ನಂತರ ಎಲ್ಲರೂ ನಮಗೆ ಸ್ಪಂದಿಸಿದ ರೀತಿ ನೋಡಿದರೆ ಕರ್ನಾಟಕದಲ್ಲೂ ಕೂಡ ನಮಗೆ ಬಂಧು, ಬಳಗ ಇದೆ ಎಂಬ ಭಾವನೆ ಉಂಟಾಗಿದೆ. ಪ್ರಧಾನಿ ಮೋದಿ ಅವರು ಬ್ಯುಸಿ ಇರುತ್ತಾರೆ. ಆದರೂ ಸಹ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ನಾವು ಚೆನ್ನಾಗಿದ್ದೇವೆ ಎಂದು ಅವರಿಗೆ ತಿಳಿಸಿದ್ದೇವೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಗುಜರಾತಿಗೆ ಮರಳುತ್ತೇವೆ ಎಂದು ಪ್ರಹ್ಲಾದ್ ಮೋದಿ ತಿಳಿಸಿದರು. ಶಾಸಕ ರಾಮದಾಸ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಎಚ್.ಎಸ್.ದಿನೇಶ್ ಕುಮಾರ್ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…
ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…
ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…
ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…