ಜಿಲ್ಲೆಗಳು

ಮೈಸೂರಿನ ಜನತೆಗೆ ನಾವು ಆಭಾರಿ: ಪ್ರಹ್ಲಾದ್‌ ಮೋದಿ

ಕಾರು ಅಪಘಾತಕ್ಕೊಳಗಾಗಿ ಚೇತರಿಸಿಕೊಂಡ ಪ್ರಧಾನಿ ಮೋದಿ ಸಹೋದರನ ಪ್ರತಿಕ್ರಿಯೆ

ಮೈಸೂರು: ಇಲ್ಲಿನ ಜನತೆ ಕಮಾಂಡೋಗಳ ರೀತಿಯಲ್ಲಿ ಬಂದು ನಮ್ಮನ್ನು ಆಸ್ಪತ್ರೆಗೆ ಸೇರಿಸಿದರು. ಇಲ್ಲಿ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಿದರು. ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ವಿರೋಧ ಪಕ್ಷದವರೂ ಸಹ ಬಂದು ಧೈರ್ಯ ತುಂಬಿದ್ದಾರೆ. ಮೈಸೂರಿನ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಅವರ ನುಡಿ. ಕಾರು ಅಪಘಾತವಾದ ತಕ್ಷಣ ನಮ್ಮನ್ನು ಆಸ್ಪತ್ರೆಗೆ ಸೇರಿಸಲು ಕಾಳಜಿ ತೋರಿದ ಮೈಸೂರಿನ ಜನತೆಗೆ ಆಭಾರಿ ಎಂದು ಅವರು ಧನ್ಯವಾದ ಸಲ್ಲಿಸಿದರು.

ಪ್ರಹ್ಲಾದ್ ಮೋದಿ ಮತ್ತು ಕುಟುಂಬಸ್ಥರು ಸಂಚರಿಸುತ್ತಿದ್ದ ಕಾರು ಮಂಗಳವಾರ ಮೈಸೂರಿನ ಕಡಕೋಳ ಬಳಿ ಅಪಘಾತಕ್ಕೀಡಾಗಿ ಐವರು ಆಸ್ಪತ್ರೆಗೆ ದಾಖಲಾಗಿದ್ದರು. ಜೆಎಸ್‌ ಎಸ್‌ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪಘಾತದಲ್ಲಿ ಚಾಲಕನದ್ದು ತಪ್ಪಿಲ್ಲ. ಈ ಕಾರು ನನ್ನ ಸ್ನೇಹಿತ ರಾಜಶೇಖರ್ ಅವರಿಗೆ ಸೇರಿದ್ದು. ನಾನು ಇಲ್ಲಿಗೆ ಬಂದಾಗ ಅವರ ಕಾರನ್ನೇ ಉಪಯೋಗಿಸಿಕೊಳ್ಳುತ್ತಿದ್ದೆ. ನಿನ್ನೆ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಾಗ ಕಾರ್‌ ನಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದ್ದು, ನಾವೆಲ್ಲ ಸುರಕ್ಷಿತವಾಗಿದ್ದೇ ವೆ ಎಂದು ಸ್ಪಷ್ಟಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ತಮ್ಮ ಕಾರ್ಯದೊತ್ತಡಗಳ ನಡುವೆಯೂ ನಮಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ನಾವು ಚೆನ್ನಾಗಿದ್ದೇ ವೆ ಎಂದು ತಿಳಿಸಿದ್ದೇವೆ ಎಂದರು. ಬೆಂಗಳೂರಿನ ನಮ್ಮ ಸ್ನೇ ಹಿತನ ಎರಡು ಕಾರಿನಲ್ಲಿ ನಾನು ಮತ್ತು ನನ್ನ ಕುಟುಂಬದವರು ಬಂಡೀಪುರಕ್ಕೆ ಹೊರಟಿದ್ದೆವು.ನಾವಿದ್ದ ಕಾರಿನಲ್ಲಿ ಮಗ ಮೇಹುಲ್ ಪ್ರಹ್ಲಾದ್ ಮೋದಿ(40) ಮತ್ತು ಸೊಸೆ ಜಿಂದಾಲ್ ಮೋದಿ (35), ಮೊಮ್ಮಗ ಮೇನಥ್ ಮೇಹುಲ್ ಮೋದಿ (6), ಡ್ರೈವರ್ ಸತ್ಯನಾರಾಯಣ(46) ಸೇರಿ ಐದು ಜನರಿದ್ದೆವು. ಎಲ್ಲರೂ ಈಗ ಚೇತರಿಸಿಕೊಂಡಿದ್ದೇವೆ ಎಂದರು.

ಕರ್ನಾಟಕದಲ್ಲೂ ನಮ್ಮ ಪರಿವಾರ..

ಮಂಗಳವಾರ ಅಪಘಾ ತ ಆದ ನಂತರ ಎಲ್ಲರೂ ನಮಗೆ ಸ್ಪಂದಿಸಿದ ರೀತಿ ನೋಡಿದರೆ ಕರ್ನಾಟಕದಲ್ಲೂ ಕೂಡ ನಮಗೆ ಬಂಧು, ಬಳಗ ಇದೆ ಎಂಬ ಭಾವನೆ ಉಂಟಾಗಿದೆ. ಪ್ರಧಾನಿ ಮೋದಿ ಅವರು ಬ್ಯುಸಿ ಇರುತ್ತಾರೆ. ಆದರೂ ಸಹ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ನಾವು ಚೆನ್ನಾಗಿದ್ದೇವೆ ಎಂದು ಅವರಿಗೆ ತಿಳಿಸಿದ್ದೇವೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಗುಜರಾತಿಗೆ ಮರಳುತ್ತೇವೆ ಎಂದು ಪ್ರಹ್ಲಾದ್ ಮೋದಿ ತಿಳಿಸಿದರು. ಶಾಸಕ ರಾಮದಾಸ್‌ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಇಂದಿನಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…

12 mins ago

ಶಿಥಿಲ ಶಾಲಾ ಕಟ್ಟಡಗಳ ತೆರವು ಯಾವಾಗ?

ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ  ಹನೂರು: ಹನೂರು…

18 mins ago

ಇಲ್ಲಿ ಒಂದಾ ಮಾಡಲು ಹೋದ್ರೆ ಇನ್ನೊಂದಾದೀತು!

ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…

24 mins ago

ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ದುರ್ಬಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…

31 mins ago

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

10 hours ago