ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇವಸ್ಥಾನದ ಬಳಿಗೆ ನಿತ್ಯವೂ ಒಂಟಿ ಸಲಗ ನೋಡಲು ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿರುವುದು ಅರಣ್ಯ ಇಲಾಖೆಗೆ ಪೀಕಲಾಟ ತಂದೊಡ್ಡಿದೆ.
ಪ್ರತಿನಿತ್ಯ ಒಂಟಿ ಸಲಗ ಸಂಜೆ ವೇಳೆ ದೇವಸ್ಥಾನದ ಬಳಿ ಬಂದು ಭಕ್ತರು ನೀಡುವ ಪ್ರಸಾದ, ಬಾಳೆಹಣ್ಣು, ಕಾಯಿ ಸವಿಯುತ್ತಿದೆ. ಜನರು ಕೂಡ ಯಾವುದೇ ಭಯವಿಲ್ಲದೆ ಆನೆಯ ಸಮೀಪ ತೆರಳಿ ಹಣ್ಣು, ಕಾಯಿ ನೀಡಲು ಮುಂದಾಗುತ್ತಿದ್ದಾರೆ. ಜೊತೆಗೆ ಕಾಡಾನೆ ಜತೆಗೆ ಸೆಲ್ಪಿ, ಫೋಟೊ, ವಿಡಿಯೋ ಮಾಡಲು ಮುಂದಾಗುತ್ತಿದ್ದಾರೆ. ಒಂದುವೇಳೆ ಕಾಡಾನೆ ಏನಾದರೂ ಜನರ ಮೇಲೆ ದಾಳಿ ಮಾಡಿದರೆ ಅರಣ್ಯ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ ಎಂದು ಭಾವಿಸಿರುವ ಅರಣ್ಯ ಇಲಾಖೆ ಆನೆಯ ನಿಯಂತ್ರಣಕ್ಕೆ ಮುಂದಾಗಿದೆ.
ಡೋನ್ ಬಳಸಿದರೆ ಕ್ರಮ: ಬಂಡೀಪುರ ಸೂಕ್ಷ್ಮ ಅರಣ್ಯ ಪ್ರದೇಶವಾಗಿದ್ದು ಇಲಾಖೆಯ ಅನುಮತಿ ಪಡೆಯದೆ ಡೋನ್ ಬಳಸಿ ಆನೆ ಮತ್ತು ದೇವಸ್ಥಾನದ ವಿಡಿಯೋ ಮಾಡಿರುವ ಬಗ್ಗೆ ಮಾಹಿತಿ ಇದ್ದು, ಅವರನ್ನು ಪತ್ತೆಹಚ್ಚಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಫ್ ಡಾ.ರಮೇಶ್ ಕುಮಾರ್ ತಿಳಿಸಿದ್ದಾರೆ.
ಕಾಡಾನೆಯು ದೇವಸ್ಥಾನ ಬಳಿ ಪ್ರತಿನಿತ್ಯ ಬರುತ್ತಿದ್ದು ಇದುವರೆಗೆ ಯಾರಿಗೂ ತೊಂದರೆ ಮಾಡಿಲ್ಲ. ಒಂದುವೇಳೆ ಮದವೇರಿ ಭಕ್ತರ ಮೇಲೆ ಎರಗಿದರೆ ಭಾರೀ ಅನಾಹುತ ಸಂಭವಿಸಬಹುದು. ಹಾಗಾಗಿ ಆನೆಯ ನಿಯಂತ್ರಣಕ್ಕೆ ಒಂದು ತಂಡ ರಚಿಸಲಾಗುವುದು.
-ಡಾ.ರಮೇಶ್ ಕುಮಾರ್, ಸಿಎಫ್, ಬಂಡೀಪುರ ಹುಲಿ ಸಂರಕ್ಷಿತ ವಲಯ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…