ಜಿಲ್ಲೆಗಳು

ಗೋಪಾಲಸ್ವಾಮಿ ದೇವಾಲಯದ ಬಳಿ ಪ್ರತಿನಿತ್ಯ ಬರುವ ಕಾಡಾನೆ ನಿಯಂತ್ರಣಕ್ಕೆ ತಂಡ ರಚನೆ

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇವಸ್ಥಾನದ ಬಳಿಗೆ ನಿತ್ಯವೂ ಒಂಟಿ ಸಲಗ ನೋಡಲು ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿರುವುದು ಅರಣ್ಯ ಇಲಾಖೆಗೆ ಪೀಕಲಾಟ ತಂದೊಡ್ಡಿದೆ.

ಪ್ರತಿನಿತ್ಯ ಒಂಟಿ ಸಲಗ ಸಂಜೆ ವೇಳೆ ದೇವಸ್ಥಾನದ ಬಳಿ ಬಂದು ಭಕ್ತರು ನೀಡುವ ಪ್ರಸಾದ, ಬಾಳೆಹಣ್ಣು, ಕಾಯಿ ಸವಿಯುತ್ತಿದೆ. ಜನರು ಕೂಡ ಯಾವುದೇ ಭಯವಿಲ್ಲದೆ ಆನೆಯ ಸಮೀಪ ತೆರಳಿ ಹಣ್ಣು, ಕಾಯಿ ನೀಡಲು ಮುಂದಾಗುತ್ತಿದ್ದಾರೆ. ಜೊತೆಗೆ ಕಾಡಾನೆ ಜತೆಗೆ ಸೆಲ್ಪಿ, ಫೋಟೊ, ವಿಡಿಯೋ ಮಾಡಲು ಮುಂದಾಗುತ್ತಿದ್ದಾರೆ. ಒಂದುವೇಳೆ ಕಾಡಾನೆ ಏನಾದರೂ ಜನರ ಮೇಲೆ ದಾಳಿ ಮಾಡಿದರೆ ಅರಣ್ಯ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ ಎಂದು ಭಾವಿಸಿರುವ ಅರಣ್ಯ ಇಲಾಖೆ ಆನೆಯ ನಿಯಂತ್ರಣಕ್ಕೆ ಮುಂದಾಗಿದೆ.

ಡೋನ್ ಬಳಸಿದರೆ ಕ್ರಮ: ಬಂಡೀಪುರ ಸೂಕ್ಷ್ಮ ಅರಣ್ಯ ಪ್ರದೇಶವಾಗಿದ್ದು ಇಲಾಖೆಯ ಅನುಮತಿ ಪಡೆಯದೆ ಡೋನ್ ಬಳಸಿ ಆನೆ ಮತ್ತು ದೇವಸ್ಥಾನದ ವಿಡಿಯೋ ಮಾಡಿರುವ ಬಗ್ಗೆ ಮಾಹಿತಿ ಇದ್ದು, ಅವರನ್ನು ಪತ್ತೆಹಚ್ಚಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಫ್ ಡಾ.ರಮೇಶ್ ಕುಮಾರ್ ತಿಳಿಸಿದ್ದಾರೆ.

ಕಾಡಾನೆಯು ದೇವಸ್ಥಾನ ಬಳಿ ಪ್ರತಿನಿತ್ಯ ಬರುತ್ತಿದ್ದು ಇದುವರೆಗೆ ಯಾರಿಗೂ ತೊಂದರೆ ಮಾಡಿಲ್ಲ. ಒಂದುವೇಳೆ ಮದವೇರಿ ಭಕ್ತರ ಮೇಲೆ ಎರಗಿದರೆ ಭಾರೀ ಅನಾಹುತ ಸಂಭವಿಸಬಹುದು. ಹಾಗಾಗಿ ಆನೆಯ ನಿಯಂತ್ರಣಕ್ಕೆ ಒಂದು ತಂಡ ರಚಿಸಲಾಗುವುದು.
-ಡಾ.ರಮೇಶ್ ಕುಮಾರ್, ಸಿಎಫ್, ಬಂಡೀಪುರ ಹುಲಿ ಸಂರಕ್ಷಿತ ವಲಯ.

andolana

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

5 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

5 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

5 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

5 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

15 hours ago