ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇವಸ್ಥಾನದ ಬಳಿಗೆ ನಿತ್ಯವೂ ಒಂಟಿ ಸಲಗ ನೋಡಲು ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿರುವುದು ಅರಣ್ಯ ಇಲಾಖೆಗೆ ಪೀಕಲಾಟ ತಂದೊಡ್ಡಿದೆ.
ಪ್ರತಿನಿತ್ಯ ಒಂಟಿ ಸಲಗ ಸಂಜೆ ವೇಳೆ ದೇವಸ್ಥಾನದ ಬಳಿ ಬಂದು ಭಕ್ತರು ನೀಡುವ ಪ್ರಸಾದ, ಬಾಳೆಹಣ್ಣು, ಕಾಯಿ ಸವಿಯುತ್ತಿದೆ. ಜನರು ಕೂಡ ಯಾವುದೇ ಭಯವಿಲ್ಲದೆ ಆನೆಯ ಸಮೀಪ ತೆರಳಿ ಹಣ್ಣು, ಕಾಯಿ ನೀಡಲು ಮುಂದಾಗುತ್ತಿದ್ದಾರೆ. ಜೊತೆಗೆ ಕಾಡಾನೆ ಜತೆಗೆ ಸೆಲ್ಪಿ, ಫೋಟೊ, ವಿಡಿಯೋ ಮಾಡಲು ಮುಂದಾಗುತ್ತಿದ್ದಾರೆ. ಒಂದುವೇಳೆ ಕಾಡಾನೆ ಏನಾದರೂ ಜನರ ಮೇಲೆ ದಾಳಿ ಮಾಡಿದರೆ ಅರಣ್ಯ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ ಎಂದು ಭಾವಿಸಿರುವ ಅರಣ್ಯ ಇಲಾಖೆ ಆನೆಯ ನಿಯಂತ್ರಣಕ್ಕೆ ಮುಂದಾಗಿದೆ.
ಡೋನ್ ಬಳಸಿದರೆ ಕ್ರಮ: ಬಂಡೀಪುರ ಸೂಕ್ಷ್ಮ ಅರಣ್ಯ ಪ್ರದೇಶವಾಗಿದ್ದು ಇಲಾಖೆಯ ಅನುಮತಿ ಪಡೆಯದೆ ಡೋನ್ ಬಳಸಿ ಆನೆ ಮತ್ತು ದೇವಸ್ಥಾನದ ವಿಡಿಯೋ ಮಾಡಿರುವ ಬಗ್ಗೆ ಮಾಹಿತಿ ಇದ್ದು, ಅವರನ್ನು ಪತ್ತೆಹಚ್ಚಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಫ್ ಡಾ.ರಮೇಶ್ ಕುಮಾರ್ ತಿಳಿಸಿದ್ದಾರೆ.
ಕಾಡಾನೆಯು ದೇವಸ್ಥಾನ ಬಳಿ ಪ್ರತಿನಿತ್ಯ ಬರುತ್ತಿದ್ದು ಇದುವರೆಗೆ ಯಾರಿಗೂ ತೊಂದರೆ ಮಾಡಿಲ್ಲ. ಒಂದುವೇಳೆ ಮದವೇರಿ ಭಕ್ತರ ಮೇಲೆ ಎರಗಿದರೆ ಭಾರೀ ಅನಾಹುತ ಸಂಭವಿಸಬಹುದು. ಹಾಗಾಗಿ ಆನೆಯ ನಿಯಂತ್ರಣಕ್ಕೆ ಒಂದು ತಂಡ ರಚಿಸಲಾಗುವುದು.
-ಡಾ.ರಮೇಶ್ ಕುಮಾರ್, ಸಿಎಫ್, ಬಂಡೀಪುರ ಹುಲಿ ಸಂರಕ್ಷಿತ ವಲಯ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…