ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇವಸ್ಥಾನದ ಬಳಿಗೆ ನಿತ್ಯವೂ ಒಂಟಿ ಸಲಗ ನೋಡಲು ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿರುವುದು ಅರಣ್ಯ ಇಲಾಖೆಗೆ ಪೀಕಲಾಟ ತಂದೊಡ್ಡಿದೆ.
ಪ್ರತಿನಿತ್ಯ ಒಂಟಿ ಸಲಗ ಸಂಜೆ ವೇಳೆ ದೇವಸ್ಥಾನದ ಬಳಿ ಬಂದು ಭಕ್ತರು ನೀಡುವ ಪ್ರಸಾದ, ಬಾಳೆಹಣ್ಣು, ಕಾಯಿ ಸವಿಯುತ್ತಿದೆ. ಜನರು ಕೂಡ ಯಾವುದೇ ಭಯವಿಲ್ಲದೆ ಆನೆಯ ಸಮೀಪ ತೆರಳಿ ಹಣ್ಣು, ಕಾಯಿ ನೀಡಲು ಮುಂದಾಗುತ್ತಿದ್ದಾರೆ. ಜೊತೆಗೆ ಕಾಡಾನೆ ಜತೆಗೆ ಸೆಲ್ಪಿ, ಫೋಟೊ, ವಿಡಿಯೋ ಮಾಡಲು ಮುಂದಾಗುತ್ತಿದ್ದಾರೆ. ಒಂದುವೇಳೆ ಕಾಡಾನೆ ಏನಾದರೂ ಜನರ ಮೇಲೆ ದಾಳಿ ಮಾಡಿದರೆ ಅರಣ್ಯ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ ಎಂದು ಭಾವಿಸಿರುವ ಅರಣ್ಯ ಇಲಾಖೆ ಆನೆಯ ನಿಯಂತ್ರಣಕ್ಕೆ ಮುಂದಾಗಿದೆ.
ಡೋನ್ ಬಳಸಿದರೆ ಕ್ರಮ: ಬಂಡೀಪುರ ಸೂಕ್ಷ್ಮ ಅರಣ್ಯ ಪ್ರದೇಶವಾಗಿದ್ದು ಇಲಾಖೆಯ ಅನುಮತಿ ಪಡೆಯದೆ ಡೋನ್ ಬಳಸಿ ಆನೆ ಮತ್ತು ದೇವಸ್ಥಾನದ ವಿಡಿಯೋ ಮಾಡಿರುವ ಬಗ್ಗೆ ಮಾಹಿತಿ ಇದ್ದು, ಅವರನ್ನು ಪತ್ತೆಹಚ್ಚಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಫ್ ಡಾ.ರಮೇಶ್ ಕುಮಾರ್ ತಿಳಿಸಿದ್ದಾರೆ.
ಕಾಡಾನೆಯು ದೇವಸ್ಥಾನ ಬಳಿ ಪ್ರತಿನಿತ್ಯ ಬರುತ್ತಿದ್ದು ಇದುವರೆಗೆ ಯಾರಿಗೂ ತೊಂದರೆ ಮಾಡಿಲ್ಲ. ಒಂದುವೇಳೆ ಮದವೇರಿ ಭಕ್ತರ ಮೇಲೆ ಎರಗಿದರೆ ಭಾರೀ ಅನಾಹುತ ಸಂಭವಿಸಬಹುದು. ಹಾಗಾಗಿ ಆನೆಯ ನಿಯಂತ್ರಣಕ್ಕೆ ಒಂದು ತಂಡ ರಚಿಸಲಾಗುವುದು.
-ಡಾ.ರಮೇಶ್ ಕುಮಾರ್, ಸಿಎಫ್, ಬಂಡೀಪುರ ಹುಲಿ ಸಂರಕ್ಷಿತ ವಲಯ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…