ಮೈಸೂರು: ನಗರದಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಜೆಸಿಬಿ ತೆಗೆದುಕೊಂಡು ಹೋಗಿ ನಾನೇ ಕೆಡವುತ್ತೇನೆಂದು ಹೇಳಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ವಿರೋಧ ಪಕ್ಷದ ನಾಯಕ ಕಿಡಿಕಾರಿದರು.
ಎರಡನೇ ಬಾರಿ ಸಂಸದರಾಗಿರುವ ಪ್ರತಾಪ್ ಸಿಂಹ ಜವಾಬ್ದಾರಿಯಿಂದ ಮಾತನಾಡಬೇಕು. ಕಾಮನ್ಸೆನ್ಸ್ ಇಲ್ಲ ಅಂದರೆ ಹೇಗೆ? ಇವನು ಯಾವನೂ ಕೆಡುತ್ತೇನೆ ಎನ್ನುವುದಕ್ಕೆ. ನಿಲ್ದಾಣದ ದುಡ್ಡು ಸರ್ಕಾರದಿಂದ ನೀಡಿರುವುದು ಹೊರತು ಇವರ ಮನೆಯಿಂದ ನೀಡಿಲ್ಲ ಎಂದು ಹೇಳಿದರು.
ಸರ್ಕಾರಿ ಇಂಜಿನಿಯರ್ಗಳು ಡಿಸೈನ್ ಮಾಡಿದಾಗ ಏನು ಮಾಡುತ್ತಿದ್ದರು?ಕಟ್ಟುವಾಗ ಗೊತ್ತಿರಲಿಲ್ಲವೇ. ಜಾತಿ,ಧರ್ಮದ ಹೆಸರಿನಲ್ಲಿ ಅಶಾಂತಿ ಉಂಟು ಮಾಡುವುದಕ್ಕೆ ಮತ್ತು ಚುನಾವಣಾ ಕಾರಣಕ್ಕಾಗಿ ಈ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದಾರೆ.ವಿವಾದಗಳನ್ನು ಹುಟ್ಟು ಹಾಕಲು ಪ್ರತಾಪ್ ಸಿಂಹ ಅಂತಹವರು ಹುಟ್ಟುಕೊಂಡಿದ್ದಾರೆ ಎಂದು ತರಾಟೆಗೆ ತಗೆದುಕೊಂಡರು.ಗುಂಬಜ್ ಮಾದರಿಯಲ್ಲಿ ಕಟ್ಟಿದ್ದರೆ ಹೊಡೆದು ಹಾಕೋಕೆ ಇವನ್ಯಾರು? ಇವನ ದುಡ್ಡಲ್ಲ. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸುತ್ತಿರುವುದನ್ನು ಮರೆಯಬಾರದು ಎಂದರು.
೬೦೦ ವರ್ಷಗಳ ಕಾಲ ದೇಶವನ್ನು ಮೊಘಲರು ಆಳ್ವಿಕೆ ಮಾಡಿದ್ದರು. ಅವಾಗ ಇವರೆಲ್ಲಾ ಎಲ್ಲಿಗೆ ಹೋಗಿದ್ರು? ಕೆಲವು ವಿಚಾರಗಳನ್ನು ಇಟ್ಟುಕೊಂಡು ಜನರ ಮನಸ್ಸನ್ನು ಸೆಳೆಯುವ ಪ್ರಯತ್ನ ಮಾಡುತ್ತಾರೆ. ಆದರೆ, ಜನರು ಬುದ್ದಿವಂತರಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಬುದ್ದಿ ಕಲಿಸುತ್ತಾರೆ ಎಂದು ಹೇಳಿದರು.
ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…
ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…
ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…