ಜಿಲ್ಲೆಗಳು

ಇವನ್ಯಾವನು ಗುಂಬಜ್ ಕೆಡವಲಿಕ್ಕೆ: ಸಿದ್ದರಾಮಯ್ಯ ಕಿಡಿ

ಮೈಸೂರು: ನಗರದಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಜೆಸಿಬಿ ತೆಗೆದುಕೊಂಡು ಹೋಗಿ ನಾನೇ ಕೆಡವುತ್ತೇನೆಂದು ಹೇಳಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ವಿರೋಧ ಪಕ್ಷದ ನಾಯಕ ಕಿಡಿಕಾರಿದರು.

ಎರಡನೇ ಬಾರಿ ಸಂಸದರಾಗಿರುವ ಪ್ರತಾಪ್ ಸಿಂಹ ಜವಾಬ್ದಾರಿಯಿಂದ ಮಾತನಾಡಬೇಕು. ಕಾಮನ್‌ಸೆನ್ಸ್ ಇಲ್ಲ ಅಂದರೆ ಹೇಗೆ? ಇವನು ಯಾವನೂ ಕೆಡುತ್ತೇನೆ ಎನ್ನುವುದಕ್ಕೆ. ನಿಲ್ದಾಣದ ದುಡ್ಡು ಸರ್ಕಾರದಿಂದ ನೀಡಿರುವುದು ಹೊರತು ಇವರ ಮನೆಯಿಂದ ನೀಡಿಲ್ಲ ಎಂದು ಹೇಳಿದರು.

ಸರ್ಕಾರಿ ಇಂಜಿನಿಯರ್‌ಗಳು ಡಿಸೈನ್ ಮಾಡಿದಾಗ ಏನು ಮಾಡುತ್ತಿದ್ದರು?ಕಟ್ಟುವಾಗ ಗೊತ್ತಿರಲಿಲ್ಲವೇ. ಜಾತಿ,ಧರ್ಮದ ಹೆಸರಿನಲ್ಲಿ ಅಶಾಂತಿ ಉಂಟು ಮಾಡುವುದಕ್ಕೆ ಮತ್ತು ಚುನಾವಣಾ ಕಾರಣಕ್ಕಾಗಿ ಈ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದಾರೆ.ವಿವಾದಗಳನ್ನು ಹುಟ್ಟು ಹಾಕಲು ಪ್ರತಾಪ್ ಸಿಂಹ ಅಂತಹವರು ಹುಟ್ಟುಕೊಂಡಿದ್ದಾರೆ ಎಂದು ತರಾಟೆಗೆ ತಗೆದುಕೊಂಡರು.ಗುಂಬಜ್ ಮಾದರಿಯಲ್ಲಿ ಕಟ್ಟಿದ್ದರೆ ಹೊಡೆದು ಹಾಕೋಕೆ ಇವನ್ಯಾರು? ಇವನ ದುಡ್ಡಲ್ಲ. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸುತ್ತಿರುವುದನ್ನು ಮರೆಯಬಾರದು ಎಂದರು.

೬೦೦ ವರ್ಷಗಳ ಕಾಲ ದೇಶವನ್ನು ಮೊಘಲರು ಆಳ್ವಿಕೆ ಮಾಡಿದ್ದರು. ಅವಾಗ ಇವರೆಲ್ಲಾ ಎಲ್ಲಿಗೆ ಹೋಗಿದ್ರು? ಕೆಲವು ವಿಚಾರಗಳನ್ನು ಇಟ್ಟುಕೊಂಡು ಜನರ ಮನಸ್ಸನ್ನು ಸೆಳೆಯುವ ಪ್ರಯತ್ನ ಮಾಡುತ್ತಾರೆ. ಆದರೆ, ಜನರು ಬುದ್ದಿವಂತರಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಬುದ್ದಿ ಕಲಿಸುತ್ತಾರೆ ಎಂದು ಹೇಳಿದರು.

andolana

Recent Posts

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

2 hours ago

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

3 hours ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

4 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

5 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

6 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

6 hours ago