ಮೈಸೂರು: ನಗರದಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಜೆಸಿಬಿ ತೆಗೆದುಕೊಂಡು ಹೋಗಿ ನಾನೇ ಕೆಡವುತ್ತೇನೆಂದು ಹೇಳಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ವಿರೋಧ ಪಕ್ಷದ ನಾಯಕ ಕಿಡಿಕಾರಿದರು.
ಎರಡನೇ ಬಾರಿ ಸಂಸದರಾಗಿರುವ ಪ್ರತಾಪ್ ಸಿಂಹ ಜವಾಬ್ದಾರಿಯಿಂದ ಮಾತನಾಡಬೇಕು. ಕಾಮನ್ಸೆನ್ಸ್ ಇಲ್ಲ ಅಂದರೆ ಹೇಗೆ? ಇವನು ಯಾವನೂ ಕೆಡುತ್ತೇನೆ ಎನ್ನುವುದಕ್ಕೆ. ನಿಲ್ದಾಣದ ದುಡ್ಡು ಸರ್ಕಾರದಿಂದ ನೀಡಿರುವುದು ಹೊರತು ಇವರ ಮನೆಯಿಂದ ನೀಡಿಲ್ಲ ಎಂದು ಹೇಳಿದರು.
ಸರ್ಕಾರಿ ಇಂಜಿನಿಯರ್ಗಳು ಡಿಸೈನ್ ಮಾಡಿದಾಗ ಏನು ಮಾಡುತ್ತಿದ್ದರು?ಕಟ್ಟುವಾಗ ಗೊತ್ತಿರಲಿಲ್ಲವೇ. ಜಾತಿ,ಧರ್ಮದ ಹೆಸರಿನಲ್ಲಿ ಅಶಾಂತಿ ಉಂಟು ಮಾಡುವುದಕ್ಕೆ ಮತ್ತು ಚುನಾವಣಾ ಕಾರಣಕ್ಕಾಗಿ ಈ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದಾರೆ.ವಿವಾದಗಳನ್ನು ಹುಟ್ಟು ಹಾಕಲು ಪ್ರತಾಪ್ ಸಿಂಹ ಅಂತಹವರು ಹುಟ್ಟುಕೊಂಡಿದ್ದಾರೆ ಎಂದು ತರಾಟೆಗೆ ತಗೆದುಕೊಂಡರು.ಗುಂಬಜ್ ಮಾದರಿಯಲ್ಲಿ ಕಟ್ಟಿದ್ದರೆ ಹೊಡೆದು ಹಾಕೋಕೆ ಇವನ್ಯಾರು? ಇವನ ದುಡ್ಡಲ್ಲ. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸುತ್ತಿರುವುದನ್ನು ಮರೆಯಬಾರದು ಎಂದರು.
೬೦೦ ವರ್ಷಗಳ ಕಾಲ ದೇಶವನ್ನು ಮೊಘಲರು ಆಳ್ವಿಕೆ ಮಾಡಿದ್ದರು. ಅವಾಗ ಇವರೆಲ್ಲಾ ಎಲ್ಲಿಗೆ ಹೋಗಿದ್ರು? ಕೆಲವು ವಿಚಾರಗಳನ್ನು ಇಟ್ಟುಕೊಂಡು ಜನರ ಮನಸ್ಸನ್ನು ಸೆಳೆಯುವ ಪ್ರಯತ್ನ ಮಾಡುತ್ತಾರೆ. ಆದರೆ, ಜನರು ಬುದ್ದಿವಂತರಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಬುದ್ದಿ ಕಲಿಸುತ್ತಾರೆ ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…