ಜಿಲ್ಲೆಗಳು

ಇವನ್ಯಾವನು ಗುಂಬಜ್ ಕೆಡವಲಿಕ್ಕೆ: ಸಿದ್ದರಾಮಯ್ಯ ಕಿಡಿ

ಮೈಸೂರು: ನಗರದಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಜೆಸಿಬಿ ತೆಗೆದುಕೊಂಡು ಹೋಗಿ ನಾನೇ ಕೆಡವುತ್ತೇನೆಂದು ಹೇಳಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ವಿರೋಧ ಪಕ್ಷದ ನಾಯಕ ಕಿಡಿಕಾರಿದರು.

ಎರಡನೇ ಬಾರಿ ಸಂಸದರಾಗಿರುವ ಪ್ರತಾಪ್ ಸಿಂಹ ಜವಾಬ್ದಾರಿಯಿಂದ ಮಾತನಾಡಬೇಕು. ಕಾಮನ್‌ಸೆನ್ಸ್ ಇಲ್ಲ ಅಂದರೆ ಹೇಗೆ? ಇವನು ಯಾವನೂ ಕೆಡುತ್ತೇನೆ ಎನ್ನುವುದಕ್ಕೆ. ನಿಲ್ದಾಣದ ದುಡ್ಡು ಸರ್ಕಾರದಿಂದ ನೀಡಿರುವುದು ಹೊರತು ಇವರ ಮನೆಯಿಂದ ನೀಡಿಲ್ಲ ಎಂದು ಹೇಳಿದರು.

ಸರ್ಕಾರಿ ಇಂಜಿನಿಯರ್‌ಗಳು ಡಿಸೈನ್ ಮಾಡಿದಾಗ ಏನು ಮಾಡುತ್ತಿದ್ದರು?ಕಟ್ಟುವಾಗ ಗೊತ್ತಿರಲಿಲ್ಲವೇ. ಜಾತಿ,ಧರ್ಮದ ಹೆಸರಿನಲ್ಲಿ ಅಶಾಂತಿ ಉಂಟು ಮಾಡುವುದಕ್ಕೆ ಮತ್ತು ಚುನಾವಣಾ ಕಾರಣಕ್ಕಾಗಿ ಈ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದಾರೆ.ವಿವಾದಗಳನ್ನು ಹುಟ್ಟು ಹಾಕಲು ಪ್ರತಾಪ್ ಸಿಂಹ ಅಂತಹವರು ಹುಟ್ಟುಕೊಂಡಿದ್ದಾರೆ ಎಂದು ತರಾಟೆಗೆ ತಗೆದುಕೊಂಡರು.ಗುಂಬಜ್ ಮಾದರಿಯಲ್ಲಿ ಕಟ್ಟಿದ್ದರೆ ಹೊಡೆದು ಹಾಕೋಕೆ ಇವನ್ಯಾರು? ಇವನ ದುಡ್ಡಲ್ಲ. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸುತ್ತಿರುವುದನ್ನು ಮರೆಯಬಾರದು ಎಂದರು.

೬೦೦ ವರ್ಷಗಳ ಕಾಲ ದೇಶವನ್ನು ಮೊಘಲರು ಆಳ್ವಿಕೆ ಮಾಡಿದ್ದರು. ಅವಾಗ ಇವರೆಲ್ಲಾ ಎಲ್ಲಿಗೆ ಹೋಗಿದ್ರು? ಕೆಲವು ವಿಚಾರಗಳನ್ನು ಇಟ್ಟುಕೊಂಡು ಜನರ ಮನಸ್ಸನ್ನು ಸೆಳೆಯುವ ಪ್ರಯತ್ನ ಮಾಡುತ್ತಾರೆ. ಆದರೆ, ಜನರು ಬುದ್ದಿವಂತರಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಬುದ್ದಿ ಕಲಿಸುತ್ತಾರೆ ಎಂದು ಹೇಳಿದರು.

andolana

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

7 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

7 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

7 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

8 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

17 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

17 hours ago