ಜಿಲ್ಲೆಗಳು

ಇವನ್ಯಾವನು ಗುಂಬಜ್ ಕೆಡವಲಿಕ್ಕೆ: ಸಿದ್ದರಾಮಯ್ಯ ಕಿಡಿ

ಮೈಸೂರು: ನಗರದಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಜೆಸಿಬಿ ತೆಗೆದುಕೊಂಡು ಹೋಗಿ ನಾನೇ ಕೆಡವುತ್ತೇನೆಂದು ಹೇಳಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ವಿರೋಧ ಪಕ್ಷದ ನಾಯಕ ಕಿಡಿಕಾರಿದರು.

ಎರಡನೇ ಬಾರಿ ಸಂಸದರಾಗಿರುವ ಪ್ರತಾಪ್ ಸಿಂಹ ಜವಾಬ್ದಾರಿಯಿಂದ ಮಾತನಾಡಬೇಕು. ಕಾಮನ್‌ಸೆನ್ಸ್ ಇಲ್ಲ ಅಂದರೆ ಹೇಗೆ? ಇವನು ಯಾವನೂ ಕೆಡುತ್ತೇನೆ ಎನ್ನುವುದಕ್ಕೆ. ನಿಲ್ದಾಣದ ದುಡ್ಡು ಸರ್ಕಾರದಿಂದ ನೀಡಿರುವುದು ಹೊರತು ಇವರ ಮನೆಯಿಂದ ನೀಡಿಲ್ಲ ಎಂದು ಹೇಳಿದರು.

ಸರ್ಕಾರಿ ಇಂಜಿನಿಯರ್‌ಗಳು ಡಿಸೈನ್ ಮಾಡಿದಾಗ ಏನು ಮಾಡುತ್ತಿದ್ದರು?ಕಟ್ಟುವಾಗ ಗೊತ್ತಿರಲಿಲ್ಲವೇ. ಜಾತಿ,ಧರ್ಮದ ಹೆಸರಿನಲ್ಲಿ ಅಶಾಂತಿ ಉಂಟು ಮಾಡುವುದಕ್ಕೆ ಮತ್ತು ಚುನಾವಣಾ ಕಾರಣಕ್ಕಾಗಿ ಈ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದಾರೆ.ವಿವಾದಗಳನ್ನು ಹುಟ್ಟು ಹಾಕಲು ಪ್ರತಾಪ್ ಸಿಂಹ ಅಂತಹವರು ಹುಟ್ಟುಕೊಂಡಿದ್ದಾರೆ ಎಂದು ತರಾಟೆಗೆ ತಗೆದುಕೊಂಡರು.ಗುಂಬಜ್ ಮಾದರಿಯಲ್ಲಿ ಕಟ್ಟಿದ್ದರೆ ಹೊಡೆದು ಹಾಕೋಕೆ ಇವನ್ಯಾರು? ಇವನ ದುಡ್ಡಲ್ಲ. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸುತ್ತಿರುವುದನ್ನು ಮರೆಯಬಾರದು ಎಂದರು.

೬೦೦ ವರ್ಷಗಳ ಕಾಲ ದೇಶವನ್ನು ಮೊಘಲರು ಆಳ್ವಿಕೆ ಮಾಡಿದ್ದರು. ಅವಾಗ ಇವರೆಲ್ಲಾ ಎಲ್ಲಿಗೆ ಹೋಗಿದ್ರು? ಕೆಲವು ವಿಚಾರಗಳನ್ನು ಇಟ್ಟುಕೊಂಡು ಜನರ ಮನಸ್ಸನ್ನು ಸೆಳೆಯುವ ಪ್ರಯತ್ನ ಮಾಡುತ್ತಾರೆ. ಆದರೆ, ಜನರು ಬುದ್ದಿವಂತರಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಬುದ್ದಿ ಕಲಿಸುತ್ತಾರೆ ಎಂದು ಹೇಳಿದರು.

andolana

Recent Posts

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

52 mins ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

2 hours ago

ಮುರುಘಾ ಮಠದ ಆಸ್ತಿ ಕೇಸ್:‌ ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ…

2 hours ago

ತಮಿಳುನಾಡು ವಿಧಾನಸಭೆ ಚುನಾವಣೆ: ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…

2 hours ago

ಕೊಡಗಿನ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರನ್ನು ಬಂಧಿಸಲಾಗಿದೆ: ಶಾಸಕ ಪೊನ್ನಣ್ಣ ಮಾಹಿತಿ

ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…

3 hours ago

ಹರ ಹರ ಮಹಾದೇವ ಘೋಷಣೆಯೊಂದಿಗೆ ಚಾರ್‌ ಧಾಮ್‌ ಯಾತ್ರೆ ಆರಂಭ

ಉತ್ತರಾಖಂಡ್:‌ ಇಲ್ಲಿನ ಪವಿತ್ರ ಚಾರ್‌ ಧಾಮ್‌ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…

4 hours ago