ಜಿಲ್ಲೆಗಳು

ಚುನಾವಣೆಯಲ್ಲಿ ನನ್ನ ಎದುರು ಯಾರೇ ನಿಂತರು ಹೆಚ್ಚಿನ ಮತಗಳ ಅಂತರದಲ್ಲಿ ಗೆದ್ದು ಬರುತ್ತೇನೆ: ಪ್ರತಾಪ್‌ ಸಿಂಹ

ಮೈಸೂರು: ಕಳೆದ ಎರಡು ದಿನಗಳ ಹಿಂದೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ತಮ್ಮ ಇಂಗ್ಲೀಷ್‌ ಹೆರಿನಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿರುವುದಾಗಿ ಅಫಿಡವಿಟ್‌ ಸಲ್ಲಿಸಿದ್ದರು. ಈ ಬಗ್ಗೆ ಅನೇಕಾ ಊಹಾಪೋಹಗಳು ಕೇಳಿ ಬಂದಿತ್ತು. ಆದರೆ ಇದಕ್ಕೆ ಈಗ ಸ್ವತಃ ಸಂಸದ ಪ್ರತಾಪ್‌ ಸಿಂಹ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.

ಸಂಖ್ಯಾಶಾಸ್ತ್ರಾಕ್ಕೆ ಸಂಬಂಧಿಸಿದಂತೆ ಪ್ರಕಾರ ತಮ್ಮ ಇಂಗ್ಲೀಷ್‌ ಹೆಸರಿನಲ್ಲಿ ಸಣ್ಣ ಬದಲಾವಣೆ ಮಾಡಿರುವುದಾಗಿ ಅಫಿಡವಿಟ್‌ನಲ್ಲಿ ತಿಳಿಸಿದ್ರು. ʼಚುನಾವಣೆ ಹಿನ್ನಲೆ ನಾನು ನನ್ನ ಹೆಸರು ಬದಲಾವಣೆ ಮಾಡಿಕೊಂಡಿಲ್ಲ. ಅದನ್ನೆಲ್ಲ ನಂಬುವವನು ನಾನಲ್ಲ ಎಂದಿದ್ದಾರೆ.

ಮೈಸೂರಿಗೆ ಹೊಸಬನಾದ ನನ್ನನ್ನು ಮೊದಲನೇ ಬಾರಿ ಚುನಾವಣೆಯಲ್ಲೇ ಜನರು ನನ್ನನ್ನು ಗೆಲ್ಲಿಸಿದ್ದಾರೆ. ಎರಡನೇ ಬಾರಿಯೂ ಹೆಚ್ಚಿನ ಅಂತರದಲ್ಲಿ ಗೆದ್ದು ಬಂದೆ. ಈ ಬಾರಿಯೂ ನನ್ನ ಗೆಲುವು ಖಚಿತ.

ಚುನಾವಣೆಯಲ್ಲಿ ನನ್ನ ಎದರು ಯಾರೇ ನಿಲ್ಲಲಿ, ಅವರ ವಿರುದ್ಧ ಹೆಚ್ಚಿನ ಮತಗಳ ಅಂತರದಲ್ಲಿ ಗೆದ್ದು ಬರುತ್ತೇನೆʼ ಎಂದು ಸಂಸದ ಪ್ರತಾಪ ಸಿಂಹ ಮಾಧ್ಯಮಗಳಿಗೆ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

22 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

22 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

22 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

22 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

22 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

22 hours ago