ಜಿಲ್ಲೆಗಳು

ಮನ್‌ ಕಿ ಬಾತ್‌ನಲ್ಲಿ ಚಾಮರಾಜನಗರದ ಮಹಿಳೆಯನ್ನು ಮೋದಿ ಹೊಗಳಿದ್ದೇಕೆ?

ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಚಾಮರಾಜನಗರದ ಮಹಿಳೆಯ ಕೆಲಸವನ್ನು ಹೊಗಳಿದ್ದಾರೆ.

ಚಾಮರಾಜನಗರ ಜಿಲ್ಲೆಯ ಉಮ್ಮತ್ತೂರು ಗ್ರಾಮದ ವರ್ಷಾ ಎಂಬುವವರ ಕರಕುಶಲ ಕಲೆಯ ಬಗ್ಗೆ ಪ್ರಧಾನಿ ಮೋದಿ ತಮ್ಮ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿ ವೋಕಲ್ ಫಾರ್ ಲೋಕಲ್ ಮಹತ್ವವನ್ನು ಸಾರಿದ್ದಾರೆ.
ಮೋದಿ ಅವರ ಮನ್ ಕಿ ಬಾತ್‌ನಿಂದ ಪ್ರೇರೇಪಣೆಗೊಂಡಿರುವ ವರ್ಷಾ, ಕರಕುಶಲ ಉದ್ಯಮ ಆರಂಭಿಸಿ, ಬಾಳೆಗಿಡದ ನಾರಿನಿಂದ ಕರಕುಶಲ ವಸ್ತುಗಳ ತಯಾರಿಸುತ್ತಿದ್ದಾರೆ. ಬಾಳೆ ದಿಂಡನ್ನು ಬಳಸಿ ಉಪ್ಪಿನಕಾಯಿ, ಚಟ್ನಿಪುಡಿ ಸೇರಿದಂತೆ ವಿವಿಧ ತಿನಿಸು ತಯಾರಿಸುತ್ತಿದ್ದಾರೆ. ಇದರಿಂದ ಐವರು ಮಹಿಳೆಯರು, ಇಬ್ಬರು ಪುರುಷರಿಗೆ ಕೆಲಸ ಕೊಟ್ಟಿದ್ದಾರೆ. ವೋಕಲ್ ಫಾರ್ ಲೋಕಲ್‌ನಿಂದ ಇದೆಲ್ಲವು ಸಾಧ್ಯ ಎಂದು ಮೋದಿ ಹೇಳಿದರು.

ಈ ಬಗ್ಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿರುವ ಚಾಮರಾಜನಗರದ ವರ್ಷಾ, ನಾನು ಎಂಟೆಕ್ ಪದವೀಧರಳಾಗಿದ್ದು ಮನ್ ಕಿ ಬಾತ್‌ನಿಂದ ಪ್ರೇರಣೆ ಪಡೆದು ಬಾಳೆ ನಾರು ಹಾಗೂ ದಿಂಡಿನಿಂದ ವಿವಿಧ ವಸ್ತುಗಳನ್ನು ತಯಾರಿಸಲು ಆರಂಭಿಸಿದೆ. ಮೇಳಗಳು, ಆನ್‌ಲೈನ್ ಮಳಿಗೆ, ಸಾವಯವ ಮಳಿಗೆಗಳಲ್ಲಿ ನಮ್ಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago