ಟಿಕೆಟ್ ಸಿಕ್ಕರೆ ಸುಮಲತಾ ಸಹಕಾರ ಕೋರುತ್ತೇನೆ ಎಂದ ಅಮರಾವತಿ ಚಂದ್ರಶೇಖರ್
ಮಂಡ್ಯ: ಅಂಬರೀಶ್ ಅವರ ಒಡನಾಟದಲ್ಲಿ 25 ವರ್ಷಗಳ ಕಾಲ ಸಕ್ರಿಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಆದರೆ ಸುಮಲತಾ ಅವರು ನನ್ನನ್ನು ಏಕೆ ದೂರವಿರಿಸಿದರು ಎಂಬುದು ಈವರೆಗೂ ತಿಳಿದಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಮರಾವತಿ ಚಂದ್ರಶೇಖರ್ ಸ್ಪಷ್ಟಪಡಿಸಿದರು.
ಅಂಬರೀಶ್ ಅವರ ಕಾಲಾ ನಂತರ ಈ ಪ್ರಶ್ನೆ ನನ್ನನ್ನು ಕಾಡುತ್ತಿದೆ. ನಾನು ಮಾಡಿರುವ ಅಪರಾಧವಾದರೂ ಏನು, ಏಕೆ ಸುಮಲತಾ ಅಂಬರೀಶ್ ನನ್ನನ್ನು ದೂರ ಇಟ್ಟರು ಎಂಬುದು ತಿಳಿಯುತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಉತ್ತರಿಸಿದರು. ನಾನಂತೂ ಅವರ ಕುಟುಂಬಕ್ಕೆ ನಿಷ್ಠನಾಗಿದ್ದೆ. ಯಾವುದೇ ಅಪರಾಧವನ್ನೂ ಮಾಡಿಲ್ಲ. ಆದರೂ ಅವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದರು.
ಟಿಕೆಟ್ ನೀಡಿದರೆ ಸುಮಲತಾ ಬೆಂಬಲ ಕೋರುತ್ತೇನೆ:
ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಾನೂ ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಪಕ್ಷ ನನಗೆ ಟಿಕೆಟ್ ನೀಡಿದಲ್ಲಿ ಸುಮಲತಾ ಅವರನ್ನು ಭೇಟಿಯಾಗಿ ಸಹಕಾರ ಕೋರುತ್ತೇನೆ. ಸಹಾಯ ಮಾಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಯಾವುದೇ ಗೊಂದಲವಿಲ್ಲ:
ಈಗಾಗಲೇ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ 16 ಮಂದಿ ಆಕಾಂಕ್ಷಿತರಾಗಿದ್ದೇವೆ. ಎಲ್ಲರೂ ಅವರವರ ರೀತಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದೇವೆ. ಪ್ರತ್ಯೇಕ ಪ್ರಚಾರದಿಂದ ಪಕ್ಷದ ವರ್ಚಸ್ಸು ಕುಂದುವುದಿಲ್ಲ. ಮತದಾರರಲ್ಲಿ ಗೊಂದಲವೂ ಆಗುವುದಿಲ್ಲ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರೇ ನಿಮ್ಮದೇ ಆದ ರೀತಿಯಲ್ಲಿ ಪಕ್ಷ ಸಂಘಟನೆ ಮಾಡುವಂತೆ ಸಲಹೆ ನೀಡಿದ್ದಾರೆ, ಹಾಗಾಗಿ ಎಲ್ಲರೂ ಪಕ್ಷ ಸಂಘಟನೆ ನಿಟ್ಟಿನಲ್ಲಿ ಪ್ರತ್ಯೇಕ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಒಗ್ಗಟ್ಟು ಪ್ರದರ್ಶನ:
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರಿಗೆ ಎಲ್ಲರೂ ಒಗ್ಗೂಡಿ ಈ ಬಾರಿ ಕೆಲಸ ಮಾಡಲಾಗುವುದು. ಜಿಲ್ಲಾದ್ಯಂತ ಒಗ್ಗಟ್ಟು ಪ್ರದರ್ಶನದಿಂದ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿರ್ಧಾರವನ್ನು ಪ್ರತಿಯೊಬ್ಬರೂ ಮಾಡಿಕೊಂಡಿದ್ದೇವೆ. ಈಗಾಗಲೇ ಎರಡು ಮೂರು ಸಭೆಗಳಲ್ಲೂ ನಮ್ಮ ನಾಯಕರು ಸಲಹೆ ನೀಡಿದ್ದಾರೆ. ಅದಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗಣಿಗ ರವಿಕುಮಾರ್ ಅವರ ವೈಯಕ್ತಿಕ ಲೋಪದಿಂದಾಗಿ ಕಡಿಮೆ ಮತಗಳ ಅಂತರದಿAದ ಹಿನ್ನಡೆ ಅನುಭವಿಸಬೇಕಾಗಿಯಿತು. ಕಾರ್ಯಕರ್ತರು ತುಂಬಾ ಚೆನ್ನಾಗಿ ಕೆಲಸ ಮಾಡಿದ್ದರು. ಅಭ್ಯರ್ಥಿಯ ತಪ್ಪು ನಿರ್ಧಾರ ಮುಳುವಾಗಿತ್ತು ಎಂದು ಹೇಳಿದರು.
ಕಾಂಗ್ರೆಸ್ ಮುಖಂಡರಾದ ಯೋಗೇಶ್, ಪುನೀತ್, ಗಿರೀಶ್ ಪಟೇಲ್, ಜಿ.ಸಿ. ಆನಂದ್, ಅನಿಲ್ ಕುಮಾರ್, ಶಂಕರ್ ಗೋಷ್ಠಿಯಲ್ಲಿದ್ದರು.
ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿಯ…
ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…
ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…
ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…
ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…