ಜಿಲ್ಲೆಗಳು

ಸುಮಲತಾ ನನ್ನನ್ನು ಏಕೆ ದೂರವಿಟ್ಟರು ಎಂಬುದು ನಿಗೂಢ : ಅಮರಾವತಿ ಚಂದ್ರಶೇಖರ್

ಟಿಕೆಟ್ ಸಿಕ್ಕರೆ ಸುಮಲತಾ ಸಹಕಾರ ಕೋರುತ್ತೇನೆ ಎಂದ ಅಮರಾವತಿ ಚಂದ್ರಶೇಖರ್

ಮಂಡ್ಯ: ಅಂಬರೀಶ್ ಅವರ ಒಡನಾಟದಲ್ಲಿ 25 ವರ್ಷಗಳ ಕಾಲ ಸಕ್ರಿಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಆದರೆ ಸುಮಲತಾ ಅವರು ನನ್ನನ್ನು ಏಕೆ ದೂರವಿರಿಸಿದರು ಎಂಬುದು ಈವರೆಗೂ ತಿಳಿದಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಮರಾವತಿ ಚಂದ್ರಶೇಖರ್ ಸ್ಪಷ್ಟಪಡಿಸಿದರು.
ಅಂಬರೀಶ್ ಅವರ ಕಾಲಾ ನಂತರ ಈ ಪ್ರಶ್ನೆ ನನ್ನನ್ನು ಕಾಡುತ್ತಿದೆ. ನಾನು ಮಾಡಿರುವ ಅಪರಾಧವಾದರೂ ಏನು, ಏಕೆ ಸುಮಲತಾ ಅಂಬರೀಶ್ ನನ್ನನ್ನು ದೂರ ಇಟ್ಟರು ಎಂಬುದು ತಿಳಿಯುತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಉತ್ತರಿಸಿದರು. ನಾನಂತೂ ಅವರ ಕುಟುಂಬಕ್ಕೆ ನಿಷ್ಠನಾಗಿದ್ದೆ. ಯಾವುದೇ ಅಪರಾಧವನ್ನೂ ಮಾಡಿಲ್ಲ. ಆದರೂ ಅವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದರು.

ಟಿಕೆಟ್ ನೀಡಿದರೆ ಸುಮಲತಾ ಬೆಂಬಲ ಕೋರುತ್ತೇನೆ:
ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಾನೂ ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಪಕ್ಷ ನನಗೆ ಟಿಕೆಟ್ ನೀಡಿದಲ್ಲಿ ಸುಮಲತಾ ಅವರನ್ನು ಭೇಟಿಯಾಗಿ ಸಹಕಾರ ಕೋರುತ್ತೇನೆ. ಸಹಾಯ ಮಾಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಯಾವುದೇ ಗೊಂದಲವಿಲ್ಲ:
ಈಗಾಗಲೇ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ 16 ಮಂದಿ ಆಕಾಂಕ್ಷಿತರಾಗಿದ್ದೇವೆ. ಎಲ್ಲರೂ ಅವರವರ ರೀತಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದೇವೆ. ಪ್ರತ್ಯೇಕ ಪ್ರಚಾರದಿಂದ ಪಕ್ಷದ ವರ್ಚಸ್ಸು ಕುಂದುವುದಿಲ್ಲ. ಮತದಾರರಲ್ಲಿ ಗೊಂದಲವೂ ಆಗುವುದಿಲ್ಲ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರೇ ನಿಮ್ಮದೇ ಆದ ರೀತಿಯಲ್ಲಿ ಪಕ್ಷ ಸಂಘಟನೆ ಮಾಡುವಂತೆ ಸಲಹೆ ನೀಡಿದ್ದಾರೆ, ಹಾಗಾಗಿ ಎಲ್ಲರೂ ಪಕ್ಷ ಸಂಘಟನೆ ನಿಟ್ಟಿನಲ್ಲಿ ಪ್ರತ್ಯೇಕ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಒಗ್ಗಟ್ಟು ಪ್ರದರ್ಶನ:
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರಿಗೆ ಎಲ್ಲರೂ ಒಗ್ಗೂಡಿ ಈ ಬಾರಿ ಕೆಲಸ ಮಾಡಲಾಗುವುದು. ಜಿಲ್ಲಾದ್ಯಂತ ಒಗ್ಗಟ್ಟು ಪ್ರದರ್ಶನದಿಂದ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿರ್ಧಾರವನ್ನು ಪ್ರತಿಯೊಬ್ಬರೂ ಮಾಡಿಕೊಂಡಿದ್ದೇವೆ. ಈಗಾಗಲೇ ಎರಡು ಮೂರು ಸಭೆಗಳಲ್ಲೂ ನಮ್ಮ ನಾಯಕರು ಸಲಹೆ ನೀಡಿದ್ದಾರೆ. ಅದಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗಣಿಗ ರವಿಕುಮಾರ್ ಅವರ ವೈಯಕ್ತಿಕ ಲೋಪದಿಂದಾಗಿ ಕಡಿಮೆ ಮತಗಳ ಅಂತರದಿAದ ಹಿನ್ನಡೆ ಅನುಭವಿಸಬೇಕಾಗಿಯಿತು. ಕಾರ್ಯಕರ್ತರು ತುಂಬಾ ಚೆನ್ನಾಗಿ ಕೆಲಸ ಮಾಡಿದ್ದರು. ಅಭ್ಯರ್ಥಿಯ ತಪ್ಪು ನಿರ್ಧಾರ ಮುಳುವಾಗಿತ್ತು ಎಂದು ಹೇಳಿದರು.
ಕಾಂಗ್ರೆಸ್ ಮುಖಂಡರಾದ ಯೋಗೇಶ್, ಪುನೀತ್, ಗಿರೀಶ್ ಪಟೇಲ್, ಜಿ.ಸಿ. ಆನಂದ್, ಅನಿಲ್ ಕುಮಾರ್, ಶಂಕರ್ ಗೋಷ್ಠಿಯಲ್ಲಿದ್ದರು.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago