ಜಿಲ್ಲೆಗಳು

ಪತ್ನಿ ಕೊಲೆಗೆ ಯತ್ನಿಸಿದ ಪತಿಗೆ 12 ವರ್ಷ ಜೈಲು

ಮೈಸೂರು: ಪತ್ನಿಯನ್ನೇ ಕೊಲೆ ಮಾಡಲು ಯತ್ನಿಸಿದ ಪತಿಗೆ ೧೨ ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು ೧೨ ಸಾವಿರ ರೂ. ದಂಡ ವಿಧಿಸಿ, ೫ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿ ಆದೇಶಿಸಿದೆ.
ಹುಣಸೂರು ತಾಲ್ಲೂಕಿನ ಹೊಸಪುರ ಗ್ರಾಮದ ಕಾಳನಾಯಕ ಎಂಬಾತನೇ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ೧೪ ವರ್ಷಗಳ ಹಿಂದೆ ಇದೇ ತಾಲ್ಲೂಕಿನ ಚಲ್ಲಹಳ್ಳಿ ಗ್ರಾಮದ ಮಂಗಳಮ್ಮ ಎಂಬವರನ್ನು ಮದುವೆಯಾಗಿದ್ದ. ಇವರಿಗೆ ಇಬ್ಬರೂ ಮಕ್ಕಳಿದ್ದಾರೆ. ಮದುವೆಯಾದ ೭ರಿಂದ ೮ ವರ್ಷ ಅನ್ಯೋನ್ಯತೆಯಿಂದ ಇದ್ದರು. ಆ ನಂತರದಲ್ಲಿ ಕಾಳನಾಯಕ ಕುಡಿದು ಬಂದು ಹೆಂಡತಿಗೆ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದ.
೨೦೧೭ರ ಫೆ.೪ರಂದು ಮಧ್ಯಾಹ್ನ ೩.೩೦ರಲ್ಲಿ ಕಾಳನಾಯಕ ಮನೆಯಲ್ಲಿ ಮಕ್ಕಳ ಜೊತೆಗೆ ಇದ್ದ ಹೆಂಡತಿಯನ್ನು ನೀನು ಮನೆ ಬಿಟ್ಟು ಹೋಗು ಎಂದು ಜಗಳ ತೆಗೆದು, ನೀನು ಸತ್ತು ಹೋದರೆ, ನಾನು ಇನ್ನೊಂದು ಮದುವೆಯಾಗುತ್ತೇನೆ ಎಂದು ಹೇಳಿ ಗಲಾಟೆ ಮಾಡಿದ್ದಾನೆ. ನಂತರ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಪ್ರಯತ್ನಿಸಿದ್ದಾನೆ. ಇದರಿಂದ ಕುತ್ತಿಗೆಯಿಂದ ಪಾದದವರೆಗೂ ಶೇ.೫೪ರಷ್ಟು ಭಾಗ ಮಂಗಳಮ್ಮನಿಗೆ ಸುಟ್ಟಗಾಯಗಳಾಗಿದ್ದವು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬಿಳಿಕೆರೆ ಠಾಣೆ ಪೊಲೀಸರು ತನಿಖೆ ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣಾಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ೫ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅವರು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಐಪಿಸಿ ಕಲಂ ೩೦೭ಕ್ಕೆ ಅಪರಾಧ ೧೦ ವರ್ಷಗಳ ಜೈಲು ಮತ್ತು ೧೦ ಸಾವಿರ ರೂ. ದಂಡ ಮತ್ತು ಐಪಿಸಿ ಕಲಂ ೪೯೮(ಎ) ಅಪರಾಧಕ್ಕೆ ೨ ವರ್ಷಗಳ ಜೈಲು ಮತ್ತು ೨ ಸಾವಿರ ರೂ. ದಂಡ ಸೇರಿದಂತೆ ಒಟ್ಟು ೧೨ ವರ್ಷಗಳ ಜೈಲು ಶಿಕ್ಷೆ ಮತ್ತು ೧೨ ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ನಾಗಪ್ಪ ಸಿ.ನಾಕಮನ್ ವಾದ ಮಂಡಿಸಿದರು.

andolanait

Recent Posts

‘ಹೆರಿಟೇಜ್ ಟೂರಿಸಂ ಅಭಿವೃದ್ಧಿಗೆ ಯೋಜನೆ’

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …

2 hours ago

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…

2 hours ago

ಅಂಬೇಡ್ಕರ್ ಜೀವಜಲವನ್ನು ಹರಿಯುವಂತೆ ಮಾಡುವುದು ನಮ್ಮ ಕೆಲಸವಾಗಿದೆ

ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…

2 hours ago

ತಾಯಿ ನಂಜನಗೂಡಿನ ನಂಜಿ, ಮಗ ನಿಕೋಲಸ್ ವಿಶ್ವವಿಖ್ಯಾತ ಕ್ಯಾಮೆರಾಮ್ಯಾನ್

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…

2 hours ago

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

12 hours ago