ಮೈಸೂರು: ಪತ್ನಿಯನ್ನೇ ಕೊಲೆ ಮಾಡಲು ಯತ್ನಿಸಿದ ಪತಿಗೆ ೧೨ ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು ೧೨ ಸಾವಿರ ರೂ. ದಂಡ ವಿಧಿಸಿ, ೫ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿ ಆದೇಶಿಸಿದೆ.
ಹುಣಸೂರು ತಾಲ್ಲೂಕಿನ ಹೊಸಪುರ ಗ್ರಾಮದ ಕಾಳನಾಯಕ ಎಂಬಾತನೇ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ೧೪ ವರ್ಷಗಳ ಹಿಂದೆ ಇದೇ ತಾಲ್ಲೂಕಿನ ಚಲ್ಲಹಳ್ಳಿ ಗ್ರಾಮದ ಮಂಗಳಮ್ಮ ಎಂಬವರನ್ನು ಮದುವೆಯಾಗಿದ್ದ. ಇವರಿಗೆ ಇಬ್ಬರೂ ಮಕ್ಕಳಿದ್ದಾರೆ. ಮದುವೆಯಾದ ೭ರಿಂದ ೮ ವರ್ಷ ಅನ್ಯೋನ್ಯತೆಯಿಂದ ಇದ್ದರು. ಆ ನಂತರದಲ್ಲಿ ಕಾಳನಾಯಕ ಕುಡಿದು ಬಂದು ಹೆಂಡತಿಗೆ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದ.
೨೦೧೭ರ ಫೆ.೪ರಂದು ಮಧ್ಯಾಹ್ನ ೩.೩೦ರಲ್ಲಿ ಕಾಳನಾಯಕ ಮನೆಯಲ್ಲಿ ಮಕ್ಕಳ ಜೊತೆಗೆ ಇದ್ದ ಹೆಂಡತಿಯನ್ನು ನೀನು ಮನೆ ಬಿಟ್ಟು ಹೋಗು ಎಂದು ಜಗಳ ತೆಗೆದು, ನೀನು ಸತ್ತು ಹೋದರೆ, ನಾನು ಇನ್ನೊಂದು ಮದುವೆಯಾಗುತ್ತೇನೆ ಎಂದು ಹೇಳಿ ಗಲಾಟೆ ಮಾಡಿದ್ದಾನೆ. ನಂತರ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಪ್ರಯತ್ನಿಸಿದ್ದಾನೆ. ಇದರಿಂದ ಕುತ್ತಿಗೆಯಿಂದ ಪಾದದವರೆಗೂ ಶೇ.೫೪ರಷ್ಟು ಭಾಗ ಮಂಗಳಮ್ಮನಿಗೆ ಸುಟ್ಟಗಾಯಗಳಾಗಿದ್ದವು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬಿಳಿಕೆರೆ ಠಾಣೆ ಪೊಲೀಸರು ತನಿಖೆ ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣಾಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ೫ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅವರು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಐಪಿಸಿ ಕಲಂ ೩೦೭ಕ್ಕೆ ಅಪರಾಧ ೧೦ ವರ್ಷಗಳ ಜೈಲು ಮತ್ತು ೧೦ ಸಾವಿರ ರೂ. ದಂಡ ಮತ್ತು ಐಪಿಸಿ ಕಲಂ ೪೯೮(ಎ) ಅಪರಾಧಕ್ಕೆ ೨ ವರ್ಷಗಳ ಜೈಲು ಮತ್ತು ೨ ಸಾವಿರ ರೂ. ದಂಡ ಸೇರಿದಂತೆ ಒಟ್ಟು ೧೨ ವರ್ಷಗಳ ಜೈಲು ಶಿಕ್ಷೆ ಮತ್ತು ೧೨ ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ನಾಗಪ್ಪ ಸಿ.ನಾಕಮನ್ ವಾದ ಮಂಡಿಸಿದರು.
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…