ಮೈಸೂರು: ಪತ್ನಿಯನ್ನೇ ಕೊಲೆ ಮಾಡಲು ಯತ್ನಿಸಿದ ಪತಿಗೆ ೧೨ ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು ೧೨ ಸಾವಿರ ರೂ. ದಂಡ ವಿಧಿಸಿ, ೫ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿ ಆದೇಶಿಸಿದೆ.
ಹುಣಸೂರು ತಾಲ್ಲೂಕಿನ ಹೊಸಪುರ ಗ್ರಾಮದ ಕಾಳನಾಯಕ ಎಂಬಾತನೇ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ೧೪ ವರ್ಷಗಳ ಹಿಂದೆ ಇದೇ ತಾಲ್ಲೂಕಿನ ಚಲ್ಲಹಳ್ಳಿ ಗ್ರಾಮದ ಮಂಗಳಮ್ಮ ಎಂಬವರನ್ನು ಮದುವೆಯಾಗಿದ್ದ. ಇವರಿಗೆ ಇಬ್ಬರೂ ಮಕ್ಕಳಿದ್ದಾರೆ. ಮದುವೆಯಾದ ೭ರಿಂದ ೮ ವರ್ಷ ಅನ್ಯೋನ್ಯತೆಯಿಂದ ಇದ್ದರು. ಆ ನಂತರದಲ್ಲಿ ಕಾಳನಾಯಕ ಕುಡಿದು ಬಂದು ಹೆಂಡತಿಗೆ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದ.
೨೦೧೭ರ ಫೆ.೪ರಂದು ಮಧ್ಯಾಹ್ನ ೩.೩೦ರಲ್ಲಿ ಕಾಳನಾಯಕ ಮನೆಯಲ್ಲಿ ಮಕ್ಕಳ ಜೊತೆಗೆ ಇದ್ದ ಹೆಂಡತಿಯನ್ನು ನೀನು ಮನೆ ಬಿಟ್ಟು ಹೋಗು ಎಂದು ಜಗಳ ತೆಗೆದು, ನೀನು ಸತ್ತು ಹೋದರೆ, ನಾನು ಇನ್ನೊಂದು ಮದುವೆಯಾಗುತ್ತೇನೆ ಎಂದು ಹೇಳಿ ಗಲಾಟೆ ಮಾಡಿದ್ದಾನೆ. ನಂತರ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಪ್ರಯತ್ನಿಸಿದ್ದಾನೆ. ಇದರಿಂದ ಕುತ್ತಿಗೆಯಿಂದ ಪಾದದವರೆಗೂ ಶೇ.೫೪ರಷ್ಟು ಭಾಗ ಮಂಗಳಮ್ಮನಿಗೆ ಸುಟ್ಟಗಾಯಗಳಾಗಿದ್ದವು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬಿಳಿಕೆರೆ ಠಾಣೆ ಪೊಲೀಸರು ತನಿಖೆ ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣಾಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ೫ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅವರು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಐಪಿಸಿ ಕಲಂ ೩೦೭ಕ್ಕೆ ಅಪರಾಧ ೧೦ ವರ್ಷಗಳ ಜೈಲು ಮತ್ತು ೧೦ ಸಾವಿರ ರೂ. ದಂಡ ಮತ್ತು ಐಪಿಸಿ ಕಲಂ ೪೯೮(ಎ) ಅಪರಾಧಕ್ಕೆ ೨ ವರ್ಷಗಳ ಜೈಲು ಮತ್ತು ೨ ಸಾವಿರ ರೂ. ದಂಡ ಸೇರಿದಂತೆ ಒಟ್ಟು ೧೨ ವರ್ಷಗಳ ಜೈಲು ಶಿಕ್ಷೆ ಮತ್ತು ೧೨ ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ನಾಗಪ್ಪ ಸಿ.ನಾಕಮನ್ ವಾದ ಮಂಡಿಸಿದರು.
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…
ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…
ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…
‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…
ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…