Mysore
22
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

‘ಕಾಡು ಪ್ರಾಣಿಗಳ ದಾಳಿ: ಸರ್ಕಾರ ನೆರವಿಗೆ ಧಾವಿಸಲಿ’

ಮಂಡ್ಯ: ಕಾಡು ಪ್ರಾಣಿಗಳು ರೈತರ ಜಾನುವಾರುಗಳ ಮೇಲೆ ದಾಳಿ ವಾಡಿ ಹಾನಿಯುಂಟು ಮಾಡಿದ ತಕ್ಷಣ ರಾಜ್ಯ ಸರ್ಕಾರ ಅನ್ನದಾತನ ನೆರವಿಗೆ ಬಂದು ಸಹಾಯಹಸ್ತ ಚಾಚಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ತಾಲ್ಲೂಕಿನ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಗ್ಗಹಳ್ಳಿ ಗ್ರಾಮದಲ್ಲಿ ವಲಯ ಅರಣ್ಯಾಧಿಕಾರಿಗಳ ಸಹೋಂಗದಲ್ಲಿ ಹಮ್ಮಿಕೊಂಡಿದ್ದ ವನ್ಯಜೀವಿ ಸಪ್ತಾಹ ಹಾಗೂ ಕಾಡು ಪ್ರಾಣಿಗಳ ಹಾವಳಿಯಿಂದ ಸುರಕ್ಷಿತವಾಗಿ ಇರುವಿಕೆ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇತ್ತೀಚೆಗೆ ಕಮ್ಮನಾಯಕನಹಳ್ಳಿ ಗ್ರಾಮದಲ್ಲಿ ಚಿರತೆಯ ದಾಳಿಗೆ ಹಸುವಿನ ಕರು ಮೃತಪಟ್ಟಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ತಮ್ಮ ಕೆಲಸವನ್ನು ಮಾಡಿದರು. ಸರ್ಕಾರದ ವತಿಯಿಂದ ಹಸುವಿನ ಮಾಲೀಕ ರೈತ ರಾಜು ಅವರಿಗೆ ಸಹಾಯಧನವನ್ನು ಕೊಡಿಸಿಕೊಡಬೇಕು ಎಂದು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದರು.

ಕಾಡು ಪ್ರಾಣಿಗಳು ರೈತರ ಜಾನುವಾರುಗಳ ಮೇಲೆ ದಾಳಿ ಮಾಡಿ ಅಪಾರ ನಷ್ಟ ಉಂಟು ಮಾಡಿದ ಸಂದರ್ಭದಲ್ಲಿ ಸರ್ಕಾರ ತಕ್ಷಣ ಅನ್ನದಾತನ ಸಹಾಯಕ್ಕೆ ಧಾವಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ತಗ್ಗಹಳ್ಳಿ ಗ್ರಾಪಂ ವಾಜಿ ಅಧ್ಯಕ್ಷ ಟಿ.ಎಂ.ಸುರೇಶ್, ಅರಣ್ಯ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!