ಮಂಡ್ಯ: ಕಾಡು ಪ್ರಾಣಿಗಳು ರೈತರ ಜಾನುವಾರುಗಳ ಮೇಲೆ ದಾಳಿ ವಾಡಿ ಹಾನಿಯುಂಟು ಮಾಡಿದ ತಕ್ಷಣ ರಾಜ್ಯ ಸರ್ಕಾರ ಅನ್ನದಾತನ ನೆರವಿಗೆ ಬಂದು ಸಹಾಯಹಸ್ತ ಚಾಚಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ತಾಲ್ಲೂಕಿನ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಗ್ಗಹಳ್ಳಿ ಗ್ರಾಮದಲ್ಲಿ ವಲಯ ಅರಣ್ಯಾಧಿಕಾರಿಗಳ ಸಹೋಂಗದಲ್ಲಿ ಹಮ್ಮಿಕೊಂಡಿದ್ದ ವನ್ಯಜೀವಿ ಸಪ್ತಾಹ ಹಾಗೂ ಕಾಡು ಪ್ರಾಣಿಗಳ ಹಾವಳಿಯಿಂದ ಸುರಕ್ಷಿತವಾಗಿ ಇರುವಿಕೆ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇತ್ತೀಚೆಗೆ ಕಮ್ಮನಾಯಕನಹಳ್ಳಿ ಗ್ರಾಮದಲ್ಲಿ ಚಿರತೆಯ ದಾಳಿಗೆ ಹಸುವಿನ ಕರು ಮೃತಪಟ್ಟಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ತಮ್ಮ ಕೆಲಸವನ್ನು ಮಾಡಿದರು. ಸರ್ಕಾರದ ವತಿಯಿಂದ ಹಸುವಿನ ಮಾಲೀಕ ರೈತ ರಾಜು ಅವರಿಗೆ ಸಹಾಯಧನವನ್ನು ಕೊಡಿಸಿಕೊಡಬೇಕು ಎಂದು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದರು.
ಕಾಡು ಪ್ರಾಣಿಗಳು ರೈತರ ಜಾನುವಾರುಗಳ ಮೇಲೆ ದಾಳಿ ಮಾಡಿ ಅಪಾರ ನಷ್ಟ ಉಂಟು ಮಾಡಿದ ಸಂದರ್ಭದಲ್ಲಿ ಸರ್ಕಾರ ತಕ್ಷಣ ಅನ್ನದಾತನ ಸಹಾಯಕ್ಕೆ ಧಾವಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ತಗ್ಗಹಳ್ಳಿ ಗ್ರಾಪಂ ವಾಜಿ ಅಧ್ಯಕ್ಷ ಟಿ.ಎಂ.ಸುರೇಶ್, ಅರಣ್ಯ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…