ಮಂಡ್ಯ: ಕಾಡು ಪ್ರಾಣಿಗಳು ರೈತರ ಜಾನುವಾರುಗಳ ಮೇಲೆ ದಾಳಿ ವಾಡಿ ಹಾನಿಯುಂಟು ಮಾಡಿದ ತಕ್ಷಣ ರಾಜ್ಯ ಸರ್ಕಾರ ಅನ್ನದಾತನ ನೆರವಿಗೆ ಬಂದು ಸಹಾಯಹಸ್ತ ಚಾಚಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ತಾಲ್ಲೂಕಿನ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಗ್ಗಹಳ್ಳಿ ಗ್ರಾಮದಲ್ಲಿ ವಲಯ ಅರಣ್ಯಾಧಿಕಾರಿಗಳ ಸಹೋಂಗದಲ್ಲಿ ಹಮ್ಮಿಕೊಂಡಿದ್ದ ವನ್ಯಜೀವಿ ಸಪ್ತಾಹ ಹಾಗೂ ಕಾಡು ಪ್ರಾಣಿಗಳ ಹಾವಳಿಯಿಂದ ಸುರಕ್ಷಿತವಾಗಿ ಇರುವಿಕೆ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇತ್ತೀಚೆಗೆ ಕಮ್ಮನಾಯಕನಹಳ್ಳಿ ಗ್ರಾಮದಲ್ಲಿ ಚಿರತೆಯ ದಾಳಿಗೆ ಹಸುವಿನ ಕರು ಮೃತಪಟ್ಟಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ತಮ್ಮ ಕೆಲಸವನ್ನು ಮಾಡಿದರು. ಸರ್ಕಾರದ ವತಿಯಿಂದ ಹಸುವಿನ ಮಾಲೀಕ ರೈತ ರಾಜು ಅವರಿಗೆ ಸಹಾಯಧನವನ್ನು ಕೊಡಿಸಿಕೊಡಬೇಕು ಎಂದು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದರು.
ಕಾಡು ಪ್ರಾಣಿಗಳು ರೈತರ ಜಾನುವಾರುಗಳ ಮೇಲೆ ದಾಳಿ ಮಾಡಿ ಅಪಾರ ನಷ್ಟ ಉಂಟು ಮಾಡಿದ ಸಂದರ್ಭದಲ್ಲಿ ಸರ್ಕಾರ ತಕ್ಷಣ ಅನ್ನದಾತನ ಸಹಾಯಕ್ಕೆ ಧಾವಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ತಗ್ಗಹಳ್ಳಿ ಗ್ರಾಪಂ ವಾಜಿ ಅಧ್ಯಕ್ಷ ಟಿ.ಎಂ.ಸುರೇಶ್, ಅರಣ್ಯ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.
ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…
ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…
ನವದೆಹಲಿ : ವಾಷಿಂಗ್ಟನ್ನ ಹಿಲ್ಟನ್ ಹೋಟೆಲ್ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…
ಸ್ವಾಮಿ ಪೊನ್ನಾಜಿ... ಕಿರಣ್ ಗಿರ್ಗಿ ಚಾಮರಾಜನಗರದ ಕಿರಿಯ ವಯಸ್ಸಿನ ಪ್ರತಿಭಾವಂತ ರಂಗ ನಿರ್ದೇಶಕ. ಈ ಹಿಂದೆ ಚಾಮರಾಜನಗರದ ರಂಗತರಂಗ ತಂಡದ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ ನಡೆದಿದೆ. ಡೊನಾಲ್ಡ್ ಟ್ರಂಪ್,…