ಮಂಡ್ಯ: ಕಾಡು ಪ್ರಾಣಿಗಳು ರೈತರ ಜಾನುವಾರುಗಳ ಮೇಲೆ ದಾಳಿ ವಾಡಿ ಹಾನಿಯುಂಟು ಮಾಡಿದ ತಕ್ಷಣ ರಾಜ್ಯ ಸರ್ಕಾರ ಅನ್ನದಾತನ ನೆರವಿಗೆ ಬಂದು ಸಹಾಯಹಸ್ತ ಚಾಚಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ತಾಲ್ಲೂಕಿನ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಗ್ಗಹಳ್ಳಿ ಗ್ರಾಮದಲ್ಲಿ ವಲಯ ಅರಣ್ಯಾಧಿಕಾರಿಗಳ ಸಹೋಂಗದಲ್ಲಿ ಹಮ್ಮಿಕೊಂಡಿದ್ದ ವನ್ಯಜೀವಿ ಸಪ್ತಾಹ ಹಾಗೂ ಕಾಡು ಪ್ರಾಣಿಗಳ ಹಾವಳಿಯಿಂದ ಸುರಕ್ಷಿತವಾಗಿ ಇರುವಿಕೆ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇತ್ತೀಚೆಗೆ ಕಮ್ಮನಾಯಕನಹಳ್ಳಿ ಗ್ರಾಮದಲ್ಲಿ ಚಿರತೆಯ ದಾಳಿಗೆ ಹಸುವಿನ ಕರು ಮೃತಪಟ್ಟಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ತಮ್ಮ ಕೆಲಸವನ್ನು ಮಾಡಿದರು. ಸರ್ಕಾರದ ವತಿಯಿಂದ ಹಸುವಿನ ಮಾಲೀಕ ರೈತ ರಾಜು ಅವರಿಗೆ ಸಹಾಯಧನವನ್ನು ಕೊಡಿಸಿಕೊಡಬೇಕು ಎಂದು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದರು.
ಕಾಡು ಪ್ರಾಣಿಗಳು ರೈತರ ಜಾನುವಾರುಗಳ ಮೇಲೆ ದಾಳಿ ಮಾಡಿ ಅಪಾರ ನಷ್ಟ ಉಂಟು ಮಾಡಿದ ಸಂದರ್ಭದಲ್ಲಿ ಸರ್ಕಾರ ತಕ್ಷಣ ಅನ್ನದಾತನ ಸಹಾಯಕ್ಕೆ ಧಾವಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ತಗ್ಗಹಳ್ಳಿ ಗ್ರಾಪಂ ವಾಜಿ ಅಧ್ಯಕ್ಷ ಟಿ.ಎಂ.ಸುರೇಶ್, ಅರಣ್ಯ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…