ಜಿಲ್ಲೆಗಳು

ಹಾಡಹಗಲೇ ರಸ್ತೆಯಲ್ಲಿ ಕಾಡಾನೆಗಳ ಆರ್ಭಟ: ರಸ್ತೆ ಮಾರ್ಗಕ್ಕೆ ಕಾಲಿಟ್ಟ ಕಾಡಾನೆಗಳು, ಗ್ರಾಮಸ್ಥರಲ್ಲಿ ಆತಂಕ

ಹನೂರು:  ಪಟ್ಟಣದಿಂದ ಅಜ್ಜಿಪುರ- ರಾಮಾಪುರ ರಸ್ತೆಯ ಮಾರ್ಗ ಮಧ್ಯದ ಅರಕನಹಳ್ಳ ಬಳಿ  ಹಾಡಹಗಲೇ ಕಾಡು ಆನೆಗಳು ರಸ್ತೆ ಸಮೀಪವೆ ಆಗಮಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ಆಗಮಿಸಿದ 5 ಕಾಡಾನೆಗಳು ರಸ್ತೆಯನ್ನು ದಾಟಿದ್ದು, ಈ ಸಮಯದಲ್ಲಿ ಎರಡೂ ಬದಿಗಳಲ್ಲಿ ಬೈಕ್ ಸವಾರರು ಹಾಗೂ ವಾಹನಗಳಲ್ಲಿದ್ದವರು ಕುತೂಹಲದಿಂದ ವಿಡಿಯೋ ಮಾಡಿದ್ದಾರೆ. ಇನ್ನೂ ಕೆಲವರು ಆತಂಕದಲ್ಲಿ ಆ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಈ ಸಂಬಂಧ ಅಜ್ಜಿಪುರ ಗ್ರಾಮದ ನಿವಾಸಿಗಳು ಮಾತನಾಡಿ, ಹಾಡಹಗಲೇ ಕಾಡಾನೆಗಳು ಮುಖ್ಯ ರಸ್ತೆಯಲ್ಲಿ ಓಡಾಡಿರುವುದು ಭಯ ಉಂಟುಮಾಡಿದೆ.  ಆದ್ದರಿಂದ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆ ಸೇರಿದಂತೆ ಇನ್ನಿತರ ಪ್ರಾಣಿಗಳು ರಸ್ತೆ ಭಾಗಕ್ಕೆ ಬಾರದಂತೆ ಸೂಕ್ತ ಕ್ರಮ ವಹಿಸಬೇಕು  ಎಂದು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

2 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

2 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

2 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

2 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

3 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

3 hours ago