ಜಿಲ್ಲೆಗಳು

ಗೋಪಾಲಸ್ವಾಮಿ ಬೆಟ್ಟದ ಸಮೀಪ ಪುಂಡಾನೆ ಸೆರೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿಬೆಟ್ಟ, ವಲಯದ ವ್ಯಾಪ್ತಿಯಲ್ಲಿನ ಜನವಸತಿ ಪ್ರದೇಶಗಳಲ್ಲಿ ಅಡ್ಡಾಡುತ್ತಾ ಜನರಲ್ಲಿ, ರೈತರಲ್ಲಿ ಭೀತಿ ಮೂಡಿಸಿದ್ದ ರೇಡಿಯೋ ಕಾಲರ್ ಅಳವಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆಹಿಡಿದಿದೆ.
ಈ ಕಾಡಾನೆ ಪ್ರತಿದಿನ ರೈತರ ಜಮೀನುಗಳಿಗೆ ನುಗ್ಗಿ, ಫಸಲು ತಿಂದು ಹಾನಿ ಮಾಡುತ್ತಿದ್ದಲ್ಲದೆ, ಜನರ ಮೇಲೂ ದಾಳಿಗೆ ಮುಂದಾಗುತ್ತಿತ್ತು ಎನ್ನಲಾಗಿದೆ. ಹೀಗಾಗಿ ರೈತರು ಕಾಡಾನೆಯನ್ನು ಸೆರೆಹಿಡಿದು ಸ್ಥಳಾಂತರಿಸುವಂತೆ ಮನವಿ ಸಲ್ಲಿಸಿದ್ದರು. ಅದರಂತೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಸಾಕಾನೆಗಳಾದ ಅಭಿಮನ್ಯು, ಮಹೇಂದ್ರ, ಗಣೇಶ ಮತ್ತು ಭೀಮ ಆನೆಗಳ ನೆರವಿನೊಂದಿಗೆ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸಿಂ, ಡಾ.ರಮೇಶ್ ಹಾಗೂ ಡಾ.ಮುಜೀಬ್ ಸಹಾಯಕರು ಕಾರ್ಯಾಚರಣೆ ನಡೆಸಿ, ಮಂಗಳವಾರ ಜಿಎಸ್ ಬೆಟ್ಟ ವಲಯ ವ್ಯಾಪ್ತಿಯ ಕಡೆಕೋಟೆ ಪ್ರದೇಶದಲ್ಲಿ ಕಾಡಾನೆಗೆ ಅರಿವಳಿಕೆ ಚುಚ್ಚು ಮದ್ದು ನೀಡುವ ಮೂಲಕ ಸುರಕ್ಷಿತವಾಗಿ ಸೆರೆಹಿಡಿಯಲಾಯಿತು.
ಸೆರೆಸಿಕ್ಕಿರುವ ಈ ಕಾಡಾನೆಗೆ ರೇಡಿಯೋ ಕಾಲರ್ ಆಳವಡಿಸಿದ್ದು, ಈ ಪುಂಡಾನೆಯನ್ನು ಬಂಡೀಪುರ ವಿಭಾಗ ವ್ಯಾಪ್ತಿಯ ಐನೂರು ಮಾರಿಗುಡಿ ವಲಯದ ರಾಮಪುರ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗಿದೆ.

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಸಹಕರಿಸಿದ ಎಲ್ಲಾ ಅಧಿಕಾರಿಗಳಿಗೆ ಬಂಡೀಪುರ ಮುಖ್ಯ ಅರಣ್ಯ ಸಂರಕ್ಷಣಾಽಕಾರಿಗಳು ಹಾಗೂ ಕ್ಷೇತ್ರ ನಿರ್ದೇಶಕರಾದ ಡಾ.ರಮೇಶ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ.

 

lokesh

Recent Posts

ಅರಣ್ಯ ಸಿಬ್ಬಂದಿಗೆ ಇಲಾಖೆಯಿಂದ ಬೇಕಿದೆ ಪ್ರೋತ್ಸಾಹ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…

24 seconds ago

ಹನೂರು | ಉಡುತೊರೆಹಳ್ಳ ಜಲಾಶಯದ ಹೂಳು ತೆಗೆಯದೆ ಸಮಸ್ಯೆ

ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…

8 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 26 ಶನಿವಾರ

19 mins ago

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…

1 hour ago

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

10 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

13 hours ago