ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಮಾಪುರ ಆನೆ ಶಿಬಿರದಲ್ಲಿ ಆನೆಯೊಂದು ಮೃತಪಟ್ಟಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್ ಕೊಂಬನ್ ಎಂಬ ಹೆಸರಿನ ಕಾಡಾನೆ ಸಾವನ್ನಪ್ಪಿದೆ.
ಹಾಸನದ ಬೇಲೂರಿನಲ್ಲಿ ಸೆರೆ ಹಿಡಿದ ಬಳಿಕ ಆನೆಗೆ ರೇಡಿಯೊ ಕಾಲರ್ ಅಳವಡಿಸಿ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಬಿಡಲಾಗಿತ್ತು. ಬಳಿಕ ಕೇರಳ ಅರಣ್ಯದ ಮೂಲಕ ಮಾನಂದವಾಡಿ ಪಟ್ಟಣಕ್ಕೆ ನುಗ್ಗಿದ್ದ ಈ ಆನೆ ಜನನಿಬಿಡ ಪ್ರದೇಶಕ್ಕೆ ನುಗ್ಗಿ ದಾಂಧಲೆ ಮಾಡಿತ್ತು.
ವಿಷಯ ತಿಳಿದ ಕೇರಳ ಅರಣ್ಯ ಇಲಾಖೆಯು ಬಂಡೀಪುರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು. ತದನಂತರ ಅರಣ್ಯಾಧಿಕಾರಿಗಳು ಅರವಳಿಕೆ ಚುಚ್ಚು ಮದ್ದು ನೀಡಿ ಆನೆಯನ್ನು ಸೆರೆ ಹಿಡಿದು ನಿನ್ನೆ ( ಫೆಬ್ರವರಿ 2 ) ಬಂಡೀಪುರದ ರಾಮಾಪುರ ಆನೆ ಶಿಬಿರಕ್ಕೆ ಕರೆ ತಂದಿದ್ದರು.
ಆದರೆ ಶಿಬಿರಕ್ಕೆ ಬರುತ್ತಿದ್ದಂತೆಯೇ ಆನೆ ಕುಸಿದು ಬಿದ್ದಿದ್ದು ಸಾವನ್ನಪ್ಪಿದೆ. ಆನೆ ಸಾವಿಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇಂದು ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಅದರ ಬಳಿಕ ಆನೆ ಸಾವಿಗೆ ಕಾರಣವೇನೆಂಬುದು ತಿಳಿದುಬರಲಿದೆ.
ಆನೆಯ ಸಾವಿನ ಕುರಿತು ಪರಿಸರವಾದಿ ಜೋಸೆಫ್ ಹೂವರ್ ಮಾತನಾಡಿದ್ದು ಅವೈಜ್ಞಾನಿಕವಾಗಿ ಆನೆ ಸೆರೆ ಕಾರ್ಯಾಚರಣೆ ನಡೆಸಿದ್ದೇ ಸಾವಿಗೆ ಕಾರಣ ಎಂದು ಆಕ್ರೋಶ ಹೊರಹಾಕಿದರು.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…