ಜಿಲ್ಲೆಗಳು

ಚಾಮರಾಜನಗರ: ಕಾರ್ಯಾಚರಣೆಯಲ್ಲಿ ಸೆರೆಸಿಕ್ಕಿದ್ದ ಆನೆ ಬಂಡೀಪುರ ಶಿಬಿರದಲ್ಲಿ ಸಾವು

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಮಾಪುರ ಆನೆ ಶಿಬಿರದಲ್ಲಿ ಆನೆಯೊಂದು ಮೃತಪಟ್ಟಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್‌ ಕೊಂಬನ್‌ ಎಂಬ ಹೆಸರಿನ ಕಾಡಾನೆ ಸಾವನ್ನಪ್ಪಿದೆ.

ಹಾಸನದ ಬೇಲೂರಿನಲ್ಲಿ ಸೆರೆ ಹಿಡಿದ ಬಳಿಕ ಆನೆಗೆ ರೇಡಿಯೊ ಕಾಲರ್‌ ಅಳವಡಿಸಿ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಬಿಡಲಾಗಿತ್ತು. ಬಳಿಕ ಕೇರಳ ಅರಣ್ಯದ ಮೂಲಕ ಮಾನಂದವಾಡಿ ಪಟ್ಟಣಕ್ಕೆ ನುಗ್ಗಿದ್ದ ಈ ಆನೆ ಜನನಿಬಿಡ ಪ್ರದೇಶಕ್ಕೆ ನುಗ್ಗಿ ದಾಂಧಲೆ ಮಾಡಿತ್ತು.

ವಿಷಯ ತಿಳಿದ ಕೇರಳ ಅರಣ್ಯ ಇಲಾಖೆಯು ಬಂಡೀಪುರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು. ತದನಂತರ ಅರಣ್ಯಾಧಿಕಾರಿಗಳು ಅರವಳಿಕೆ ಚುಚ್ಚು ಮದ್ದು ನೀಡಿ ಆನೆಯನ್ನು ಸೆರೆ ಹಿಡಿದು ನಿನ್ನೆ ( ಫೆಬ್ರವರಿ 2 ) ಬಂಡೀಪುರದ ರಾಮಾಪುರ ಆನೆ ಶಿಬಿರಕ್ಕೆ ಕರೆ ತಂದಿದ್ದರು.

ಆದರೆ ಶಿಬಿರಕ್ಕೆ ಬರುತ್ತಿದ್ದಂತೆಯೇ ಆನೆ ಕುಸಿದು ಬಿದ್ದಿದ್ದು ಸಾವನ್ನಪ್ಪಿದೆ. ಆನೆ ಸಾವಿಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇಂದು ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಅದರ ಬಳಿಕ ಆನೆ ಸಾವಿಗೆ ಕಾರಣವೇನೆಂಬುದು ತಿಳಿದುಬರಲಿದೆ.

ಆನೆಯ ಸಾವಿನ ಕುರಿತು ಪರಿಸರವಾದಿ ಜೋಸೆಫ್‌ ಹೂವರ್‌ ಮಾತನಾಡಿದ್ದು ಅವೈಜ್ಞಾನಿಕವಾಗಿ ಆನೆ ಸೆರೆ ಕಾರ್ಯಾಚರಣೆ ನಡೆಸಿದ್ದೇ ಸಾವಿಗೆ ಕಾರಣ ಎಂದು ಆಕ್ರೋಶ ಹೊರಹಾಕಿದರು.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago