ಜಿಲ್ಲೆಗಳು

ಚಾಮರಾಜನಗರ: ಕಾರ್ಯಾಚರಣೆಯಲ್ಲಿ ಸೆರೆಸಿಕ್ಕಿದ್ದ ಆನೆ ಬಂಡೀಪುರ ಶಿಬಿರದಲ್ಲಿ ಸಾವು

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಮಾಪುರ ಆನೆ ಶಿಬಿರದಲ್ಲಿ ಆನೆಯೊಂದು ಮೃತಪಟ್ಟಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್‌ ಕೊಂಬನ್‌ ಎಂಬ ಹೆಸರಿನ ಕಾಡಾನೆ ಸಾವನ್ನಪ್ಪಿದೆ.

ಹಾಸನದ ಬೇಲೂರಿನಲ್ಲಿ ಸೆರೆ ಹಿಡಿದ ಬಳಿಕ ಆನೆಗೆ ರೇಡಿಯೊ ಕಾಲರ್‌ ಅಳವಡಿಸಿ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಬಿಡಲಾಗಿತ್ತು. ಬಳಿಕ ಕೇರಳ ಅರಣ್ಯದ ಮೂಲಕ ಮಾನಂದವಾಡಿ ಪಟ್ಟಣಕ್ಕೆ ನುಗ್ಗಿದ್ದ ಈ ಆನೆ ಜನನಿಬಿಡ ಪ್ರದೇಶಕ್ಕೆ ನುಗ್ಗಿ ದಾಂಧಲೆ ಮಾಡಿತ್ತು.

ವಿಷಯ ತಿಳಿದ ಕೇರಳ ಅರಣ್ಯ ಇಲಾಖೆಯು ಬಂಡೀಪುರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು. ತದನಂತರ ಅರಣ್ಯಾಧಿಕಾರಿಗಳು ಅರವಳಿಕೆ ಚುಚ್ಚು ಮದ್ದು ನೀಡಿ ಆನೆಯನ್ನು ಸೆರೆ ಹಿಡಿದು ನಿನ್ನೆ ( ಫೆಬ್ರವರಿ 2 ) ಬಂಡೀಪುರದ ರಾಮಾಪುರ ಆನೆ ಶಿಬಿರಕ್ಕೆ ಕರೆ ತಂದಿದ್ದರು.

ಆದರೆ ಶಿಬಿರಕ್ಕೆ ಬರುತ್ತಿದ್ದಂತೆಯೇ ಆನೆ ಕುಸಿದು ಬಿದ್ದಿದ್ದು ಸಾವನ್ನಪ್ಪಿದೆ. ಆನೆ ಸಾವಿಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇಂದು ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಅದರ ಬಳಿಕ ಆನೆ ಸಾವಿಗೆ ಕಾರಣವೇನೆಂಬುದು ತಿಳಿದುಬರಲಿದೆ.

ಆನೆಯ ಸಾವಿನ ಕುರಿತು ಪರಿಸರವಾದಿ ಜೋಸೆಫ್‌ ಹೂವರ್‌ ಮಾತನಾಡಿದ್ದು ಅವೈಜ್ಞಾನಿಕವಾಗಿ ಆನೆ ಸೆರೆ ಕಾರ್ಯಾಚರಣೆ ನಡೆಸಿದ್ದೇ ಸಾವಿಗೆ ಕಾರಣ ಎಂದು ಆಕ್ರೋಶ ಹೊರಹಾಕಿದರು.

andolana

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

3 hours ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

3 hours ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

3 hours ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

3 hours ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

13 hours ago