ಜಿಲ್ಲೆಗಳು

ಚಾಮರಾಜನಗರ: ಕಾರ್ಯಾಚರಣೆಯಲ್ಲಿ ಸೆರೆಸಿಕ್ಕಿದ್ದ ಆನೆ ಬಂಡೀಪುರ ಶಿಬಿರದಲ್ಲಿ ಸಾವು

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಮಾಪುರ ಆನೆ ಶಿಬಿರದಲ್ಲಿ ಆನೆಯೊಂದು ಮೃತಪಟ್ಟಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್‌ ಕೊಂಬನ್‌ ಎಂಬ ಹೆಸರಿನ ಕಾಡಾನೆ ಸಾವನ್ನಪ್ಪಿದೆ.

ಹಾಸನದ ಬೇಲೂರಿನಲ್ಲಿ ಸೆರೆ ಹಿಡಿದ ಬಳಿಕ ಆನೆಗೆ ರೇಡಿಯೊ ಕಾಲರ್‌ ಅಳವಡಿಸಿ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಬಿಡಲಾಗಿತ್ತು. ಬಳಿಕ ಕೇರಳ ಅರಣ್ಯದ ಮೂಲಕ ಮಾನಂದವಾಡಿ ಪಟ್ಟಣಕ್ಕೆ ನುಗ್ಗಿದ್ದ ಈ ಆನೆ ಜನನಿಬಿಡ ಪ್ರದೇಶಕ್ಕೆ ನುಗ್ಗಿ ದಾಂಧಲೆ ಮಾಡಿತ್ತು.

ವಿಷಯ ತಿಳಿದ ಕೇರಳ ಅರಣ್ಯ ಇಲಾಖೆಯು ಬಂಡೀಪುರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು. ತದನಂತರ ಅರಣ್ಯಾಧಿಕಾರಿಗಳು ಅರವಳಿಕೆ ಚುಚ್ಚು ಮದ್ದು ನೀಡಿ ಆನೆಯನ್ನು ಸೆರೆ ಹಿಡಿದು ನಿನ್ನೆ ( ಫೆಬ್ರವರಿ 2 ) ಬಂಡೀಪುರದ ರಾಮಾಪುರ ಆನೆ ಶಿಬಿರಕ್ಕೆ ಕರೆ ತಂದಿದ್ದರು.

ಆದರೆ ಶಿಬಿರಕ್ಕೆ ಬರುತ್ತಿದ್ದಂತೆಯೇ ಆನೆ ಕುಸಿದು ಬಿದ್ದಿದ್ದು ಸಾವನ್ನಪ್ಪಿದೆ. ಆನೆ ಸಾವಿಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇಂದು ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಅದರ ಬಳಿಕ ಆನೆ ಸಾವಿಗೆ ಕಾರಣವೇನೆಂಬುದು ತಿಳಿದುಬರಲಿದೆ.

ಆನೆಯ ಸಾವಿನ ಕುರಿತು ಪರಿಸರವಾದಿ ಜೋಸೆಫ್‌ ಹೂವರ್‌ ಮಾತನಾಡಿದ್ದು ಅವೈಜ್ಞಾನಿಕವಾಗಿ ಆನೆ ಸೆರೆ ಕಾರ್ಯಾಚರಣೆ ನಡೆಸಿದ್ದೇ ಸಾವಿಗೆ ಕಾರಣ ಎಂದು ಆಕ್ರೋಶ ಹೊರಹಾಕಿದರು.

andolana

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago