ಜಿಲ್ಲೆಗಳು

ಕೊಳ್ಳೇಗಾಲದಲ್ಲಿ ವನ್ಯಜೀವಿ ಸಪ್ತಾಹ

ಕೊಳ್ಳೇಗಾಲ: ಪಟ್ಟಣದಲ್ಲಿ ಆಯೋಜಿಸಿದ್ದ ೬೮ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಅಪರ ಸಿವಿಲ್ ನ್ಯಾಯಾಧೀಶರಾದ ಸಿ.ಜೆ.ರಘು ಉದ್ಘಾಟಿಸಿ ಮಾತನಾಡಿದ ಅವರು, ಪ್ರಕೃತಿ ಹಾಗೂ ಮಾನವನ ನಡುವೆ ನೇರ ಸಂಬಂಧ ಇರುವುದರಿಂದ ಪ್ರಕೃತಿ ನಾಶಕ್ಕೆ ಉಂಟಾಗುವ ಅವಘಡಗಳನ್ನು ತಪ್ಪಿಸುವ ಕರ್ತವ್ಯ ಎಲ್ಲರ ಮೇಲಿದೆ ಎಂದು ಹೇಳಿದರು.

ಮುಂದಿನ ಪೀಳಿಗೆಯ ಒಳಿತಿಗಾಗಿ ಅರಣ್ಯ ಹಾಗೂ ವನ್ಯಜೀವಿಗಳ ಉಳಿಸುವ ಕರ್ತವ್ಯ ನಮ್ಮದಾಗಿದೆ. ಪ್ರತಿೊಂಬ್ಬರು ಪ್ರಕೃತಿಯ ಕುರಿತು ಅರಿವು ಮೂಡಿಸಬೇಕಾಗಿದೆ ಎಂದು ತಿಳಿಸಿದರು.

ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಲ್.ನಂದೀಶ್ ಮಾತನಾಡಿ, ಅರಣ್ಯ ಮತ್ತು ವನ್ಯಜೀವಿಗಳ ಉಳಿವಿನ ಬಗ್ಗೆ ಅರಿವು ಮೂಡಿಬೇಕು. ಪ್ರಕೃತಿ ವಿಕೋಪ ತಡೆಗಟ್ಟಲು ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ ಅಗತ್ಯವಿದೆ. ಈ ದೃಷ್ಟಿಯಿಂದ ಸರ್ಕಾರ ಅನೇಕ ೋಂಜನೆಗಳನ್ನು ಜಾರಿಗೆ ತಂದು ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಯನ್ನು ಮಾಡುತ್ತಾ ಬಂದಿದೆ. ಈ ಬಗ್ಗೆ ಅರಿವು ಮೂಡಿಸಲೆಂದು ರಾಜ್ಯಾದ್ಯಂತ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಸಂರಕ್ಷಣಾ ಅಧಿಕಾರಿ ಡಾ.ಸಂತೋಷ್ ಕುಮಾರ್ ಮಾತನಾಡಿ, ಪ್ರಕೃತಿಯಲ್ಲಿ ಪ್ರತಿೊಂಂದು ಪ್ರಾಣಿ-ಪಕ್ಷಿಗಳು ಪರೋಕ್ಷವಾಗಿ ಮಾನವನಿಗೆ ಉಪಕಾರವನ್ನೇ ಮಾಡುತ್ತಾ ಬಂದಿವೆ. ಯಾವುದೇ ಪ್ರಾಣಿ-ಪಕ್ಷಿಗಳು ನಶಿಸದಂತೆ ಸಂರಕ್ಷಿಸಬೇಕು ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಮರಡಿಗುಡ್ಡ ವೃಕ್ಷವನದ ಗೇಟ್ ಎದುರು ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಮ್ಯಾರಥಾನ್‌ಗೆ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ ಚಾಲನೆ ನೀಡಿದರು. ಮ್ಯಾರಥಾನ್‌ನಲ್ಲಿ ಭಾಗವಹಿಸಿ ವಿಜೇತರಾದ ದೊಡ್ಡಿಂದುವಾಡಿ ಡಿ.ರಾಜು, ಹಳೇ ಅಣಗಳ್ಳಿ ಶಿವಕುಮಾರ್, ಟೌನ್ ಆಕಾಶ್ ಇವರಿಗೆ ಬಹುಮಾನ ನೀಡಲಾಯಿತು.

ತಹಸಿಲ್ದಾರ್ ಮಂಜುಳಾ, ಡಿವೈಎಸ್ಪಿ ನಾಗರಾಜು, ಇನ್‌ಸ್ಪೆಕ್ಟರ್ ಶಿವರಾಜ್ ಮುಧೋಳ್, ಎಸ್‌ಐ ಚೇತನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ್, ಅಂಚೆ ಇಲಾಖೆ ಅಧೀಕ್ಷಕ ಹೆಚ್.ಸಿ.ಸದಾನಂದ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್, ಹನೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಗಿರೀಶ್ ಓಂಕಾರ್ ಹಾಜರಿದ್ದರು.

 

andolana

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

7 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

9 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

9 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

9 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

10 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

10 hours ago