ಜಿಲ್ಲೆಗಳು

ಕೊಳ್ಳೇಗಾಲದಲ್ಲಿ ವನ್ಯಜೀವಿ ಸಪ್ತಾಹ

ಕೊಳ್ಳೇಗಾಲ: ಪಟ್ಟಣದಲ್ಲಿ ಆಯೋಜಿಸಿದ್ದ ೬೮ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಅಪರ ಸಿವಿಲ್ ನ್ಯಾಯಾಧೀಶರಾದ ಸಿ.ಜೆ.ರಘು ಉದ್ಘಾಟಿಸಿ ಮಾತನಾಡಿದ ಅವರು, ಪ್ರಕೃತಿ ಹಾಗೂ ಮಾನವನ ನಡುವೆ ನೇರ ಸಂಬಂಧ ಇರುವುದರಿಂದ ಪ್ರಕೃತಿ ನಾಶಕ್ಕೆ ಉಂಟಾಗುವ ಅವಘಡಗಳನ್ನು ತಪ್ಪಿಸುವ ಕರ್ತವ್ಯ ಎಲ್ಲರ ಮೇಲಿದೆ ಎಂದು ಹೇಳಿದರು.

ಮುಂದಿನ ಪೀಳಿಗೆಯ ಒಳಿತಿಗಾಗಿ ಅರಣ್ಯ ಹಾಗೂ ವನ್ಯಜೀವಿಗಳ ಉಳಿಸುವ ಕರ್ತವ್ಯ ನಮ್ಮದಾಗಿದೆ. ಪ್ರತಿೊಂಬ್ಬರು ಪ್ರಕೃತಿಯ ಕುರಿತು ಅರಿವು ಮೂಡಿಸಬೇಕಾಗಿದೆ ಎಂದು ತಿಳಿಸಿದರು.

ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಲ್.ನಂದೀಶ್ ಮಾತನಾಡಿ, ಅರಣ್ಯ ಮತ್ತು ವನ್ಯಜೀವಿಗಳ ಉಳಿವಿನ ಬಗ್ಗೆ ಅರಿವು ಮೂಡಿಬೇಕು. ಪ್ರಕೃತಿ ವಿಕೋಪ ತಡೆಗಟ್ಟಲು ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ ಅಗತ್ಯವಿದೆ. ಈ ದೃಷ್ಟಿಯಿಂದ ಸರ್ಕಾರ ಅನೇಕ ೋಂಜನೆಗಳನ್ನು ಜಾರಿಗೆ ತಂದು ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಯನ್ನು ಮಾಡುತ್ತಾ ಬಂದಿದೆ. ಈ ಬಗ್ಗೆ ಅರಿವು ಮೂಡಿಸಲೆಂದು ರಾಜ್ಯಾದ್ಯಂತ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಸಂರಕ್ಷಣಾ ಅಧಿಕಾರಿ ಡಾ.ಸಂತೋಷ್ ಕುಮಾರ್ ಮಾತನಾಡಿ, ಪ್ರಕೃತಿಯಲ್ಲಿ ಪ್ರತಿೊಂಂದು ಪ್ರಾಣಿ-ಪಕ್ಷಿಗಳು ಪರೋಕ್ಷವಾಗಿ ಮಾನವನಿಗೆ ಉಪಕಾರವನ್ನೇ ಮಾಡುತ್ತಾ ಬಂದಿವೆ. ಯಾವುದೇ ಪ್ರಾಣಿ-ಪಕ್ಷಿಗಳು ನಶಿಸದಂತೆ ಸಂರಕ್ಷಿಸಬೇಕು ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಮರಡಿಗುಡ್ಡ ವೃಕ್ಷವನದ ಗೇಟ್ ಎದುರು ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಮ್ಯಾರಥಾನ್‌ಗೆ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ ಚಾಲನೆ ನೀಡಿದರು. ಮ್ಯಾರಥಾನ್‌ನಲ್ಲಿ ಭಾಗವಹಿಸಿ ವಿಜೇತರಾದ ದೊಡ್ಡಿಂದುವಾಡಿ ಡಿ.ರಾಜು, ಹಳೇ ಅಣಗಳ್ಳಿ ಶಿವಕುಮಾರ್, ಟೌನ್ ಆಕಾಶ್ ಇವರಿಗೆ ಬಹುಮಾನ ನೀಡಲಾಯಿತು.

ತಹಸಿಲ್ದಾರ್ ಮಂಜುಳಾ, ಡಿವೈಎಸ್ಪಿ ನಾಗರಾಜು, ಇನ್‌ಸ್ಪೆಕ್ಟರ್ ಶಿವರಾಜ್ ಮುಧೋಳ್, ಎಸ್‌ಐ ಚೇತನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ್, ಅಂಚೆ ಇಲಾಖೆ ಅಧೀಕ್ಷಕ ಹೆಚ್.ಸಿ.ಸದಾನಂದ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್, ಹನೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಗಿರೀಶ್ ಓಂಕಾರ್ ಹಾಜರಿದ್ದರು.

 

andolana

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

56 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

1 hour ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago