ಜಿಲ್ಲೆಗಳು

ಕೊಳ್ಳೇಗಾಲದಲ್ಲಿ ವನ್ಯಜೀವಿ ಸಪ್ತಾಹ

ಕೊಳ್ಳೇಗಾಲ: ಪಟ್ಟಣದಲ್ಲಿ ಆಯೋಜಿಸಿದ್ದ ೬೮ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಅಪರ ಸಿವಿಲ್ ನ್ಯಾಯಾಧೀಶರಾದ ಸಿ.ಜೆ.ರಘು ಉದ್ಘಾಟಿಸಿ ಮಾತನಾಡಿದ ಅವರು, ಪ್ರಕೃತಿ ಹಾಗೂ ಮಾನವನ ನಡುವೆ ನೇರ ಸಂಬಂಧ ಇರುವುದರಿಂದ ಪ್ರಕೃತಿ ನಾಶಕ್ಕೆ ಉಂಟಾಗುವ ಅವಘಡಗಳನ್ನು ತಪ್ಪಿಸುವ ಕರ್ತವ್ಯ ಎಲ್ಲರ ಮೇಲಿದೆ ಎಂದು ಹೇಳಿದರು.

ಮುಂದಿನ ಪೀಳಿಗೆಯ ಒಳಿತಿಗಾಗಿ ಅರಣ್ಯ ಹಾಗೂ ವನ್ಯಜೀವಿಗಳ ಉಳಿಸುವ ಕರ್ತವ್ಯ ನಮ್ಮದಾಗಿದೆ. ಪ್ರತಿೊಂಬ್ಬರು ಪ್ರಕೃತಿಯ ಕುರಿತು ಅರಿವು ಮೂಡಿಸಬೇಕಾಗಿದೆ ಎಂದು ತಿಳಿಸಿದರು.

ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಲ್.ನಂದೀಶ್ ಮಾತನಾಡಿ, ಅರಣ್ಯ ಮತ್ತು ವನ್ಯಜೀವಿಗಳ ಉಳಿವಿನ ಬಗ್ಗೆ ಅರಿವು ಮೂಡಿಬೇಕು. ಪ್ರಕೃತಿ ವಿಕೋಪ ತಡೆಗಟ್ಟಲು ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ ಅಗತ್ಯವಿದೆ. ಈ ದೃಷ್ಟಿಯಿಂದ ಸರ್ಕಾರ ಅನೇಕ ೋಂಜನೆಗಳನ್ನು ಜಾರಿಗೆ ತಂದು ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಯನ್ನು ಮಾಡುತ್ತಾ ಬಂದಿದೆ. ಈ ಬಗ್ಗೆ ಅರಿವು ಮೂಡಿಸಲೆಂದು ರಾಜ್ಯಾದ್ಯಂತ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಸಂರಕ್ಷಣಾ ಅಧಿಕಾರಿ ಡಾ.ಸಂತೋಷ್ ಕುಮಾರ್ ಮಾತನಾಡಿ, ಪ್ರಕೃತಿಯಲ್ಲಿ ಪ್ರತಿೊಂಂದು ಪ್ರಾಣಿ-ಪಕ್ಷಿಗಳು ಪರೋಕ್ಷವಾಗಿ ಮಾನವನಿಗೆ ಉಪಕಾರವನ್ನೇ ಮಾಡುತ್ತಾ ಬಂದಿವೆ. ಯಾವುದೇ ಪ್ರಾಣಿ-ಪಕ್ಷಿಗಳು ನಶಿಸದಂತೆ ಸಂರಕ್ಷಿಸಬೇಕು ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಮರಡಿಗುಡ್ಡ ವೃಕ್ಷವನದ ಗೇಟ್ ಎದುರು ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಮ್ಯಾರಥಾನ್‌ಗೆ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ ಚಾಲನೆ ನೀಡಿದರು. ಮ್ಯಾರಥಾನ್‌ನಲ್ಲಿ ಭಾಗವಹಿಸಿ ವಿಜೇತರಾದ ದೊಡ್ಡಿಂದುವಾಡಿ ಡಿ.ರಾಜು, ಹಳೇ ಅಣಗಳ್ಳಿ ಶಿವಕುಮಾರ್, ಟೌನ್ ಆಕಾಶ್ ಇವರಿಗೆ ಬಹುಮಾನ ನೀಡಲಾಯಿತು.

ತಹಸಿಲ್ದಾರ್ ಮಂಜುಳಾ, ಡಿವೈಎಸ್ಪಿ ನಾಗರಾಜು, ಇನ್‌ಸ್ಪೆಕ್ಟರ್ ಶಿವರಾಜ್ ಮುಧೋಳ್, ಎಸ್‌ಐ ಚೇತನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ್, ಅಂಚೆ ಇಲಾಖೆ ಅಧೀಕ್ಷಕ ಹೆಚ್.ಸಿ.ಸದಾನಂದ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್, ಹನೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಗಿರೀಶ್ ಓಂಕಾರ್ ಹಾಜರಿದ್ದರು.

 

andolana

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

8 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

9 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

9 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

10 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

10 hours ago