ಜಿಲ್ಲೆಗಳು

ಕೊಳ್ಳೇಗಾಲದಲ್ಲಿ ವನ್ಯಜೀವಿ ಸಪ್ತಾಹ

ಕೊಳ್ಳೇಗಾಲ: ಪಟ್ಟಣದಲ್ಲಿ ಆಯೋಜಿಸಿದ್ದ ೬೮ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಅಪರ ಸಿವಿಲ್ ನ್ಯಾಯಾಧೀಶರಾದ ಸಿ.ಜೆ.ರಘು ಉದ್ಘಾಟಿಸಿ ಮಾತನಾಡಿದ ಅವರು, ಪ್ರಕೃತಿ ಹಾಗೂ ಮಾನವನ ನಡುವೆ ನೇರ ಸಂಬಂಧ ಇರುವುದರಿಂದ ಪ್ರಕೃತಿ ನಾಶಕ್ಕೆ ಉಂಟಾಗುವ ಅವಘಡಗಳನ್ನು ತಪ್ಪಿಸುವ ಕರ್ತವ್ಯ ಎಲ್ಲರ ಮೇಲಿದೆ ಎಂದು ಹೇಳಿದರು.

ಮುಂದಿನ ಪೀಳಿಗೆಯ ಒಳಿತಿಗಾಗಿ ಅರಣ್ಯ ಹಾಗೂ ವನ್ಯಜೀವಿಗಳ ಉಳಿಸುವ ಕರ್ತವ್ಯ ನಮ್ಮದಾಗಿದೆ. ಪ್ರತಿೊಂಬ್ಬರು ಪ್ರಕೃತಿಯ ಕುರಿತು ಅರಿವು ಮೂಡಿಸಬೇಕಾಗಿದೆ ಎಂದು ತಿಳಿಸಿದರು.

ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಲ್.ನಂದೀಶ್ ಮಾತನಾಡಿ, ಅರಣ್ಯ ಮತ್ತು ವನ್ಯಜೀವಿಗಳ ಉಳಿವಿನ ಬಗ್ಗೆ ಅರಿವು ಮೂಡಿಬೇಕು. ಪ್ರಕೃತಿ ವಿಕೋಪ ತಡೆಗಟ್ಟಲು ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ ಅಗತ್ಯವಿದೆ. ಈ ದೃಷ್ಟಿಯಿಂದ ಸರ್ಕಾರ ಅನೇಕ ೋಂಜನೆಗಳನ್ನು ಜಾರಿಗೆ ತಂದು ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಯನ್ನು ಮಾಡುತ್ತಾ ಬಂದಿದೆ. ಈ ಬಗ್ಗೆ ಅರಿವು ಮೂಡಿಸಲೆಂದು ರಾಜ್ಯಾದ್ಯಂತ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಸಂರಕ್ಷಣಾ ಅಧಿಕಾರಿ ಡಾ.ಸಂತೋಷ್ ಕುಮಾರ್ ಮಾತನಾಡಿ, ಪ್ರಕೃತಿಯಲ್ಲಿ ಪ್ರತಿೊಂಂದು ಪ್ರಾಣಿ-ಪಕ್ಷಿಗಳು ಪರೋಕ್ಷವಾಗಿ ಮಾನವನಿಗೆ ಉಪಕಾರವನ್ನೇ ಮಾಡುತ್ತಾ ಬಂದಿವೆ. ಯಾವುದೇ ಪ್ರಾಣಿ-ಪಕ್ಷಿಗಳು ನಶಿಸದಂತೆ ಸಂರಕ್ಷಿಸಬೇಕು ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಮರಡಿಗುಡ್ಡ ವೃಕ್ಷವನದ ಗೇಟ್ ಎದುರು ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಮ್ಯಾರಥಾನ್‌ಗೆ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ ಚಾಲನೆ ನೀಡಿದರು. ಮ್ಯಾರಥಾನ್‌ನಲ್ಲಿ ಭಾಗವಹಿಸಿ ವಿಜೇತರಾದ ದೊಡ್ಡಿಂದುವಾಡಿ ಡಿ.ರಾಜು, ಹಳೇ ಅಣಗಳ್ಳಿ ಶಿವಕುಮಾರ್, ಟೌನ್ ಆಕಾಶ್ ಇವರಿಗೆ ಬಹುಮಾನ ನೀಡಲಾಯಿತು.

ತಹಸಿಲ್ದಾರ್ ಮಂಜುಳಾ, ಡಿವೈಎಸ್ಪಿ ನಾಗರಾಜು, ಇನ್‌ಸ್ಪೆಕ್ಟರ್ ಶಿವರಾಜ್ ಮುಧೋಳ್, ಎಸ್‌ಐ ಚೇತನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ್, ಅಂಚೆ ಇಲಾಖೆ ಅಧೀಕ್ಷಕ ಹೆಚ್.ಸಿ.ಸದಾನಂದ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್, ಹನೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಗಿರೀಶ್ ಓಂಕಾರ್ ಹಾಜರಿದ್ದರು.

 

andolana

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

50 mins ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

1 hour ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

2 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

5 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

7 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

8 hours ago