ಮೈಸೂರು: ಸಾಕಷ್ಟು ಪರ-ವಿರೋಧದ ನಡುವೆ ಬೆಂಗಳೂರು-ಮೈಸೂರು ನಡುವಿನ ಟಿಪ್ಪು ಎಕ್ಸ್ಪ್ರೆಸ್ (Tipu Express) ಹೆಸರು ಈಗ ಒಡೆಯರ್ ಎಕ್ಸ್ ಪ್ರೆಸ್ ಆಗಿ ಬದಲಾಗಿದೆ.
ಒಡೆಯರ್ ಎಕ್ಸ್ ಪ್ರೆಸ್ ಎಂದು ಹೊಸದಾಗಿ ಅಳವಡಿಸಲಾಗಿದ್ದ ನಾಮಕರಣ ಫಲಕವನ್ನು ಹೊತ್ತ ರೈಲು ಶನಿವಾರ ಮೈಸೂರಿಗೆ ಆಗಮಿಸಿದೆ. ಮಂಡ್ಯದಲ್ಲಿ ಭಾನುವಾರ ಬಿಜೆಪಿ ಕಾರ್ಯಕರ್ತರು ರೈಲನ್ನು ಸಿಂಗರಿಸಿ, ಕುಂಬಳಕಾಯಿ ಒಡೆದು ಸಂಭ್ರಮಿಸಿದರು.
ಇದೇ ವೇಳೆ ಟಿಪ್ಪು ಎಕ್ಸ್ ಪ್ರೆಸ್ ಮರುನಾಮಕರಣದ ಕುರಿತು ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಪ್ರತಿಕ್ರಿಯೆ ನೀಡಿದ್ದು ಸರಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ನಡೆದ ಮಹಾರಥೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹತ್ತನೇ ಚಾಮರಾಜ ಒಡೆಯರ್ ಕಾಲದಿಂದಲೂ ರೈಲ್ವೆ ಅಭಿವೃದ್ಧಿಯಾಗಿದೆ. ಒಡೆಯರ್ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡಿರುವುದು ಸಂತೋಷದ ವಿಷಯ ಎಂದು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದರು.
ಶನಿವಾರವೇ ರೈಲುಗಳ ಮೇಲಿದ್ದ ಟಿಪ್ಪು ಎಕ್ಸ್ ಪ್ರೆಸ್ ಹೆಸರು ಇರೋ ಫಲಕ ತೆಗೆದು ಒಡೆಯರ್ ಎಕ್ಸ್ಪ್ರೆಸ್ ಎಂದು ಹಾಕಲಾಗಿದೆ.ಈ ಫೋಟೋಗಳನ್ನು ಸಂಸದ ಪ್ರತಾಪ್ ಸಿಂಹ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ತಾಳಗುಪ್ಪ ರೈಲು ಕುವೆಂಪು ಎಕ್ಸ್ ಪ್ರೆಸ್
ಮೈಸೂರು-ಬೆಂಗಳೂರು ನಡುವಿನ ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಒಡೆಯರ್ ಎಕ್ಸ್ ಪ್ರೆಸ್ (Wodeyar Express) ಎಂದು ಮರುನಾಮಕರಣ ಮಾಡಲಾಗಿದೆ. ಇನ್ನು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ ಪ್ರೆಸ್ (Kuvempu Express) ಎಂದು ನಾಮಕರಣ ಮಾಡಿ ರೈಲ್ವೆ ಇಲಾಖೆ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ರೈಲಿನ ನಾಮಫಲಕವನ್ನೂ ಬದಲಿಸಲಾಗಿದೆ.
ಜುಲೈ 25ರಂದು ಪತ್ರ ಬರೆದಿದ್ದ ಪ್ರತಾಪ್ ಸಿಂಹ
ಮೈಸೂರು-ಬೆಂಗಳೂರು ನಡುವಿನ ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಮರುನಾಮಕರಣ ಮಾಡುವಂತೆ ಕೋರಿ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಜುಲೈ 25ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ರಿಗೆ ಈ ಮನವಿಗೆ ಸ್ಪಂದಿಸಿದ್ದಾರೆ.
ಸಿದ್ದರಾಮಯ್ಯ ಆಕ್ರೋಶ
ಟಿಪ್ಪು ಎಕ್ಸ್ ಪ್ರೆಸ್ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ಎಂದು ಹೆಸರು ಬದಲಾಯಿಸಿದ ಸರ್ಕಾರದ ನಿರ್ಧಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…