ಮೈಸೂರು: ಸಾಕಷ್ಟು ಪರ-ವಿರೋಧದ ನಡುವೆ ಬೆಂಗಳೂರು-ಮೈಸೂರು ನಡುವಿನ ಟಿಪ್ಪು ಎಕ್ಸ್ಪ್ರೆಸ್ (Tipu Express) ಹೆಸರು ಈಗ ಒಡೆಯರ್ ಎಕ್ಸ್ ಪ್ರೆಸ್ ಆಗಿ ಬದಲಾಗಿದೆ.
ಒಡೆಯರ್ ಎಕ್ಸ್ ಪ್ರೆಸ್ ಎಂದು ಹೊಸದಾಗಿ ಅಳವಡಿಸಲಾಗಿದ್ದ ನಾಮಕರಣ ಫಲಕವನ್ನು ಹೊತ್ತ ರೈಲು ಶನಿವಾರ ಮೈಸೂರಿಗೆ ಆಗಮಿಸಿದೆ. ಮಂಡ್ಯದಲ್ಲಿ ಭಾನುವಾರ ಬಿಜೆಪಿ ಕಾರ್ಯಕರ್ತರು ರೈಲನ್ನು ಸಿಂಗರಿಸಿ, ಕುಂಬಳಕಾಯಿ ಒಡೆದು ಸಂಭ್ರಮಿಸಿದರು.
ಇದೇ ವೇಳೆ ಟಿಪ್ಪು ಎಕ್ಸ್ ಪ್ರೆಸ್ ಮರುನಾಮಕರಣದ ಕುರಿತು ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಪ್ರತಿಕ್ರಿಯೆ ನೀಡಿದ್ದು ಸರಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ನಡೆದ ಮಹಾರಥೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹತ್ತನೇ ಚಾಮರಾಜ ಒಡೆಯರ್ ಕಾಲದಿಂದಲೂ ರೈಲ್ವೆ ಅಭಿವೃದ್ಧಿಯಾಗಿದೆ. ಒಡೆಯರ್ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡಿರುವುದು ಸಂತೋಷದ ವಿಷಯ ಎಂದು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದರು.
ಶನಿವಾರವೇ ರೈಲುಗಳ ಮೇಲಿದ್ದ ಟಿಪ್ಪು ಎಕ್ಸ್ ಪ್ರೆಸ್ ಹೆಸರು ಇರೋ ಫಲಕ ತೆಗೆದು ಒಡೆಯರ್ ಎಕ್ಸ್ಪ್ರೆಸ್ ಎಂದು ಹಾಕಲಾಗಿದೆ.ಈ ಫೋಟೋಗಳನ್ನು ಸಂಸದ ಪ್ರತಾಪ್ ಸಿಂಹ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ತಾಳಗುಪ್ಪ ರೈಲು ಕುವೆಂಪು ಎಕ್ಸ್ ಪ್ರೆಸ್
ಮೈಸೂರು-ಬೆಂಗಳೂರು ನಡುವಿನ ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಒಡೆಯರ್ ಎಕ್ಸ್ ಪ್ರೆಸ್ (Wodeyar Express) ಎಂದು ಮರುನಾಮಕರಣ ಮಾಡಲಾಗಿದೆ. ಇನ್ನು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ ಪ್ರೆಸ್ (Kuvempu Express) ಎಂದು ನಾಮಕರಣ ಮಾಡಿ ರೈಲ್ವೆ ಇಲಾಖೆ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ರೈಲಿನ ನಾಮಫಲಕವನ್ನೂ ಬದಲಿಸಲಾಗಿದೆ.
ಜುಲೈ 25ರಂದು ಪತ್ರ ಬರೆದಿದ್ದ ಪ್ರತಾಪ್ ಸಿಂಹ
ಮೈಸೂರು-ಬೆಂಗಳೂರು ನಡುವಿನ ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಮರುನಾಮಕರಣ ಮಾಡುವಂತೆ ಕೋರಿ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಜುಲೈ 25ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ರಿಗೆ ಈ ಮನವಿಗೆ ಸ್ಪಂದಿಸಿದ್ದಾರೆ.
ಸಿದ್ದರಾಮಯ್ಯ ಆಕ್ರೋಶ
ಟಿಪ್ಪು ಎಕ್ಸ್ ಪ್ರೆಸ್ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ಎಂದು ಹೆಸರು ಬದಲಾಯಿಸಿದ ಸರ್ಕಾರದ ನಿರ್ಧಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…