ಜಿಲ್ಲೆಗಳು

ಕುಂಬಳಕಾಯಿ ಒಡೆದು ಒಡೆಯರ್‌ ಎಕ್ಸ್ ಪ್ರೆಸ್ ರೈಲಿಗೆ ಸ್ವಾಗತ

ಮೈಸೂರು: ಸಾಕಷ್ಟು ಪರ-ವಿರೋಧದ ನಡುವೆ ಬೆಂಗಳೂರು-ಮೈಸೂರು ನಡುವಿನ ಟಿಪ್ಪು ಎಕ್ಸ್‌ಪ್ರೆಸ್‌ (Tipu Express) ಹೆಸರು ಈಗ ಒಡೆಯರ್‌ ಎಕ್ಸ್‌ ಪ್ರೆಸ್ ಆಗಿ ಬದಲಾಗಿದೆ.

ಒಡೆಯರ್‌ ಎಕ್ಸ್‌ ಪ್ರೆಸ್‌ ಎಂದು ಹೊಸದಾಗಿ ಅಳವಡಿಸಲಾಗಿದ್ದ ನಾಮಕರಣ ಫಲಕವನ್ನು ಹೊತ್ತ ರೈಲು ಶನಿವಾರ ಮೈಸೂರಿಗೆ ಆಗಮಿಸಿದೆ. ಮಂಡ್ಯದಲ್ಲಿ ಭಾನುವಾರ ಬಿಜೆಪಿ ಕಾರ್ಯಕರ್ತರು ರೈಲನ್ನು ಸಿಂಗರಿಸಿ, ಕುಂಬಳಕಾಯಿ ಒಡೆದು ಸಂಭ್ರಮಿಸಿದರು.

ಇದೇ ವೇಳೆ ಟಿಪ್ಪು ಎಕ್ಸ್ ಪ್ರೆಸ್ ಮರುನಾಮಕರಣದ ಕುರಿತು ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಪ್ರತಿಕ್ರಿಯೆ ನೀಡಿದ್ದು ಸರಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ನಡೆದ ಮಹಾರಥೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹತ್ತನೇ ಚಾಮರಾಜ ಒಡೆಯರ್ ಕಾಲದಿಂದಲೂ ರೈಲ್ವೆ ಅಭಿವೃದ್ಧಿಯಾಗಿದೆ. ಒಡೆಯರ್ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡಿರುವುದು ಸಂತೋಷದ ವಿಷಯ ಎಂದು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದರು.

ಶನಿವಾರವೇ ರೈಲುಗಳ ಮೇಲಿದ್ದ ಟಿಪ್ಪು ಎಕ್ಸ್ ಪ್ರೆಸ್ ಹೆಸರು ಇರೋ ಫಲಕ ತೆಗೆದು ಒಡೆಯರ್ ಎಕ್ಸ್ಪ್ರೆಸ್ ಎಂದು ಹಾಕಲಾಗಿದೆ.ಈ ಫೋಟೋಗಳನ್ನು ಸಂಸದ ಪ್ರತಾಪ್ ಸಿಂಹ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ತಾಳಗುಪ್ಪ ರೈಲು ಕುವೆಂಪು ಎಕ್ಸ್ ಪ್ರೆಸ್

ಮೈಸೂರು-ಬೆಂಗಳೂರು ನಡುವಿನ ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಒಡೆಯರ್ ಎಕ್ಸ್ ಪ್ರೆಸ್ (Wodeyar Express) ಎಂದು ಮರುನಾಮಕರಣ ಮಾಡಲಾಗಿದೆ. ಇನ್ನು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ ಪ್ರೆಸ್ (Kuvempu Express) ಎಂದು ನಾಮಕರಣ ಮಾಡಿ ರೈಲ್ವೆ ಇಲಾಖೆ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ರೈಲಿನ ನಾಮಫಲಕವನ್ನೂ ಬದಲಿಸಲಾಗಿದೆ.

ಜುಲೈ 25ರಂದು ಪತ್ರ ಬರೆದಿದ್ದ ಪ್ರತಾಪ್ ಸಿಂಹ

ಮೈಸೂರು-ಬೆಂಗಳೂರು ನಡುವಿನ ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಮರುನಾಮಕರಣ ಮಾಡುವಂತೆ ಕೋರಿ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಜುಲೈ 25ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ರಿಗೆ ಈ ಮನವಿಗೆ ಸ್ಪಂದಿಸಿದ್ದಾರೆ.

ಸಿದ್ದರಾಮಯ್ಯ ಆಕ್ರೋಶ

ಟಿಪ್ಪು ಎಕ್ಸ್ ಪ್ರೆಸ್ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ಎಂದು ಹೆಸರು ಬದಲಾಯಿಸಿದ ಸರ್ಕಾರದ ನಿರ್ಧಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.

andolana

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

13 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago