ಮೈಸೂರು: ಸಾಕಷ್ಟು ಪರ-ವಿರೋಧದ ನಡುವೆ ಬೆಂಗಳೂರು-ಮೈಸೂರು ನಡುವಿನ ಟಿಪ್ಪು ಎಕ್ಸ್ಪ್ರೆಸ್ (Tipu Express) ಹೆಸರು ಈಗ ಒಡೆಯರ್ ಎಕ್ಸ್ ಪ್ರೆಸ್ ಆಗಿ ಬದಲಾಗಿದೆ.
ಒಡೆಯರ್ ಎಕ್ಸ್ ಪ್ರೆಸ್ ಎಂದು ಹೊಸದಾಗಿ ಅಳವಡಿಸಲಾಗಿದ್ದ ನಾಮಕರಣ ಫಲಕವನ್ನು ಹೊತ್ತ ರೈಲು ಶನಿವಾರ ಮೈಸೂರಿಗೆ ಆಗಮಿಸಿದೆ. ಮಂಡ್ಯದಲ್ಲಿ ಭಾನುವಾರ ಬಿಜೆಪಿ ಕಾರ್ಯಕರ್ತರು ರೈಲನ್ನು ಸಿಂಗರಿಸಿ, ಕುಂಬಳಕಾಯಿ ಒಡೆದು ಸಂಭ್ರಮಿಸಿದರು.
ಇದೇ ವೇಳೆ ಟಿಪ್ಪು ಎಕ್ಸ್ ಪ್ರೆಸ್ ಮರುನಾಮಕರಣದ ಕುರಿತು ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಪ್ರತಿಕ್ರಿಯೆ ನೀಡಿದ್ದು ಸರಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ನಡೆದ ಮಹಾರಥೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹತ್ತನೇ ಚಾಮರಾಜ ಒಡೆಯರ್ ಕಾಲದಿಂದಲೂ ರೈಲ್ವೆ ಅಭಿವೃದ್ಧಿಯಾಗಿದೆ. ಒಡೆಯರ್ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡಿರುವುದು ಸಂತೋಷದ ವಿಷಯ ಎಂದು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದರು.
ಶನಿವಾರವೇ ರೈಲುಗಳ ಮೇಲಿದ್ದ ಟಿಪ್ಪು ಎಕ್ಸ್ ಪ್ರೆಸ್ ಹೆಸರು ಇರೋ ಫಲಕ ತೆಗೆದು ಒಡೆಯರ್ ಎಕ್ಸ್ಪ್ರೆಸ್ ಎಂದು ಹಾಕಲಾಗಿದೆ.ಈ ಫೋಟೋಗಳನ್ನು ಸಂಸದ ಪ್ರತಾಪ್ ಸಿಂಹ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ತಾಳಗುಪ್ಪ ರೈಲು ಕುವೆಂಪು ಎಕ್ಸ್ ಪ್ರೆಸ್
ಮೈಸೂರು-ಬೆಂಗಳೂರು ನಡುವಿನ ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಒಡೆಯರ್ ಎಕ್ಸ್ ಪ್ರೆಸ್ (Wodeyar Express) ಎಂದು ಮರುನಾಮಕರಣ ಮಾಡಲಾಗಿದೆ. ಇನ್ನು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ ಪ್ರೆಸ್ (Kuvempu Express) ಎಂದು ನಾಮಕರಣ ಮಾಡಿ ರೈಲ್ವೆ ಇಲಾಖೆ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ರೈಲಿನ ನಾಮಫಲಕವನ್ನೂ ಬದಲಿಸಲಾಗಿದೆ.
ಜುಲೈ 25ರಂದು ಪತ್ರ ಬರೆದಿದ್ದ ಪ್ರತಾಪ್ ಸಿಂಹ
ಮೈಸೂರು-ಬೆಂಗಳೂರು ನಡುವಿನ ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಮರುನಾಮಕರಣ ಮಾಡುವಂತೆ ಕೋರಿ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಜುಲೈ 25ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ರಿಗೆ ಈ ಮನವಿಗೆ ಸ್ಪಂದಿಸಿದ್ದಾರೆ.
ಸಿದ್ದರಾಮಯ್ಯ ಆಕ್ರೋಶ
ಟಿಪ್ಪು ಎಕ್ಸ್ ಪ್ರೆಸ್ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ಎಂದು ಹೆಸರು ಬದಲಾಯಿಸಿದ ಸರ್ಕಾರದ ನಿರ್ಧಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…