ಜಿಲ್ಲೆಗಳು

ಕುಂಬಳಕಾಯಿ ಒಡೆದು ಒಡೆಯರ್‌ ಎಕ್ಸ್ ಪ್ರೆಸ್ ರೈಲಿಗೆ ಸ್ವಾಗತ

ಮೈಸೂರು: ಸಾಕಷ್ಟು ಪರ-ವಿರೋಧದ ನಡುವೆ ಬೆಂಗಳೂರು-ಮೈಸೂರು ನಡುವಿನ ಟಿಪ್ಪು ಎಕ್ಸ್‌ಪ್ರೆಸ್‌ (Tipu Express) ಹೆಸರು ಈಗ ಒಡೆಯರ್‌ ಎಕ್ಸ್‌ ಪ್ರೆಸ್ ಆಗಿ ಬದಲಾಗಿದೆ.

ಒಡೆಯರ್‌ ಎಕ್ಸ್‌ ಪ್ರೆಸ್‌ ಎಂದು ಹೊಸದಾಗಿ ಅಳವಡಿಸಲಾಗಿದ್ದ ನಾಮಕರಣ ಫಲಕವನ್ನು ಹೊತ್ತ ರೈಲು ಶನಿವಾರ ಮೈಸೂರಿಗೆ ಆಗಮಿಸಿದೆ. ಮಂಡ್ಯದಲ್ಲಿ ಭಾನುವಾರ ಬಿಜೆಪಿ ಕಾರ್ಯಕರ್ತರು ರೈಲನ್ನು ಸಿಂಗರಿಸಿ, ಕುಂಬಳಕಾಯಿ ಒಡೆದು ಸಂಭ್ರಮಿಸಿದರು.

ಇದೇ ವೇಳೆ ಟಿಪ್ಪು ಎಕ್ಸ್ ಪ್ರೆಸ್ ಮರುನಾಮಕರಣದ ಕುರಿತು ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಪ್ರತಿಕ್ರಿಯೆ ನೀಡಿದ್ದು ಸರಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ನಡೆದ ಮಹಾರಥೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹತ್ತನೇ ಚಾಮರಾಜ ಒಡೆಯರ್ ಕಾಲದಿಂದಲೂ ರೈಲ್ವೆ ಅಭಿವೃದ್ಧಿಯಾಗಿದೆ. ಒಡೆಯರ್ ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡಿರುವುದು ಸಂತೋಷದ ವಿಷಯ ಎಂದು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದರು.

ಶನಿವಾರವೇ ರೈಲುಗಳ ಮೇಲಿದ್ದ ಟಿಪ್ಪು ಎಕ್ಸ್ ಪ್ರೆಸ್ ಹೆಸರು ಇರೋ ಫಲಕ ತೆಗೆದು ಒಡೆಯರ್ ಎಕ್ಸ್ಪ್ರೆಸ್ ಎಂದು ಹಾಕಲಾಗಿದೆ.ಈ ಫೋಟೋಗಳನ್ನು ಸಂಸದ ಪ್ರತಾಪ್ ಸಿಂಹ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ತಾಳಗುಪ್ಪ ರೈಲು ಕುವೆಂಪು ಎಕ್ಸ್ ಪ್ರೆಸ್

ಮೈಸೂರು-ಬೆಂಗಳೂರು ನಡುವಿನ ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಒಡೆಯರ್ ಎಕ್ಸ್ ಪ್ರೆಸ್ (Wodeyar Express) ಎಂದು ಮರುನಾಮಕರಣ ಮಾಡಲಾಗಿದೆ. ಇನ್ನು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ ಪ್ರೆಸ್ (Kuvempu Express) ಎಂದು ನಾಮಕರಣ ಮಾಡಿ ರೈಲ್ವೆ ಇಲಾಖೆ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ರೈಲಿನ ನಾಮಫಲಕವನ್ನೂ ಬದಲಿಸಲಾಗಿದೆ.

ಜುಲೈ 25ರಂದು ಪತ್ರ ಬರೆದಿದ್ದ ಪ್ರತಾಪ್ ಸಿಂಹ

ಮೈಸೂರು-ಬೆಂಗಳೂರು ನಡುವಿನ ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಮರುನಾಮಕರಣ ಮಾಡುವಂತೆ ಕೋರಿ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಜುಲೈ 25ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ರಿಗೆ ಈ ಮನವಿಗೆ ಸ್ಪಂದಿಸಿದ್ದಾರೆ.

ಸಿದ್ದರಾಮಯ್ಯ ಆಕ್ರೋಶ

ಟಿಪ್ಪು ಎಕ್ಸ್ ಪ್ರೆಸ್ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ಎಂದು ಹೆಸರು ಬದಲಾಯಿಸಿದ ಸರ್ಕಾರದ ನಿರ್ಧಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.

andolana

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

5 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

5 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

5 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

6 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

6 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

15 hours ago