ಜಿಲ್ಲೆಗಳು

ಗಂಡನ ಜೊತೆ ಸೇರಿ ತಾಯಿಯನ್ನೇ ಕೊಲೆಗೈದಳಾ ಮಗಳು?

ಗಂಡನ ಜತೆ ಸೇರಿ ತಾಯಿಯನ್ನೇ ಕೊಲೆ ಮಾಡಿ ರಾತ್ರೋರಾತ್ರಿ ಶವ ಹೂತಿಟ್ಟ ಘಟನೆ ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಾರದಮ್ಮ(50) ಮೃತ ಮಹಿಳೆ. ಶಾರದಮ್ಮ ತಮ್ಮ ಮಗಳು ಅನುಷಾಳನ್ನು ಮೈಸೂರಿನ ಹಾರೋಹಳ್ಳಿಯ ದೇವರಾಜ್‌ ಎಂಬಾತನಿಗೆ ಮದುವೆ ಮಾಡಿದ್ದರು.

ಒಬ್ಬಳೇ ಮಗಳಾದ ಕಾರಣ ಶಾರದಮ್ಮ ಆಗಾಗ ಅಳಿಯನ ಮನೆಗೆ ತೆರಳಿ ಮಗಳ ಯೋಗಕ್ಷೇಮ ವಿಚಾರಿಸಿಕೊಂಡು ಬರುತ್ತಿದ್ದರು. ಹೀಗೆ ನವೆಂಬರ್‌ 2022ರಲ್ಲಿ ಮಗಳ ಮನೆಗೆ ತೆರಳಿದ್ದ ಶಾರದಮ್ಮ ಜಗಳದಲ್ಲಿ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಮಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಹೀಗೆ ಹಾರೋಹಳ್ಳಿಯಲ್ಲಿ ಸತ್ತ ತಾಯಿಯನ್ನು ಅನುಷಾ ಹಾಗೂ ದೇವರಾಜ್‌ ಹಾರೋಹಳ್ಳಿಯಿಂದ ಹೆಬ್ಬಕವಾಡಿಗೆ ತಂದು ಗುಟ್ಟಾಗಿ ಹೂತುಹಾಕಿದ್ದಾರೆ.

ಬಳಿಕ ಆರೇಳು ತಿಂಗಳು ಸುಮ್ಮನಿದ್ದ ಮಗಳು 2023ರ ಜೂನ್‌ ತಿಂಗಳಿನಲ್ಲಿ ತನ್ನ ತಾಯಿ ಕಾಣೆಯಾಗಿರುವುದರ ಬಗ್ಗೆ ವರುಣಾ ಪೊಲೀಸ್‌ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾಳೆ. ಇಷ್ಟು ದಿನಗಳ ಕಾಲ ಹುಡುಕಿದರೂ ಪ್ರಯೋಜನೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಅನುಮಾನಗೊಂಡು ಮಗಳು ಹಾಗೂ ಅಳಿಯನನ್ನು ವಿಚಾರಣೆ ನಡೆಸಿದಾಗ ನಡೆದ ಘಟನೆ ಬೆಳಕಿಗೆ ಬಂದಿದೆ. ನಂತರ ಪ್ರಕರಣವನ್ನು ಮಂಡ್ಯ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿದ್ದು, ಆರೋಪಿಗಳು ಶವ ಹೂತಿಟ್ಟ ಜಾಗವನ್ನು ತೋರಿಸಿದ್ದು ಮೃತದೇಹಕ್ಕಾಗಿ ಶೋಧ ಕಾರ್ಯ ಆರಂಭಗೊಂಡಿದೆ.

andolana

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

13 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

31 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

54 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago