ಜಿಲ್ಲೆಗಳು

ಗಂಡನ ಜೊತೆ ಸೇರಿ ತಾಯಿಯನ್ನೇ ಕೊಲೆಗೈದಳಾ ಮಗಳು?

ಗಂಡನ ಜತೆ ಸೇರಿ ತಾಯಿಯನ್ನೇ ಕೊಲೆ ಮಾಡಿ ರಾತ್ರೋರಾತ್ರಿ ಶವ ಹೂತಿಟ್ಟ ಘಟನೆ ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಾರದಮ್ಮ(50) ಮೃತ ಮಹಿಳೆ. ಶಾರದಮ್ಮ ತಮ್ಮ ಮಗಳು ಅನುಷಾಳನ್ನು ಮೈಸೂರಿನ ಹಾರೋಹಳ್ಳಿಯ ದೇವರಾಜ್‌ ಎಂಬಾತನಿಗೆ ಮದುವೆ ಮಾಡಿದ್ದರು.

ಒಬ್ಬಳೇ ಮಗಳಾದ ಕಾರಣ ಶಾರದಮ್ಮ ಆಗಾಗ ಅಳಿಯನ ಮನೆಗೆ ತೆರಳಿ ಮಗಳ ಯೋಗಕ್ಷೇಮ ವಿಚಾರಿಸಿಕೊಂಡು ಬರುತ್ತಿದ್ದರು. ಹೀಗೆ ನವೆಂಬರ್‌ 2022ರಲ್ಲಿ ಮಗಳ ಮನೆಗೆ ತೆರಳಿದ್ದ ಶಾರದಮ್ಮ ಜಗಳದಲ್ಲಿ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಮಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಹೀಗೆ ಹಾರೋಹಳ್ಳಿಯಲ್ಲಿ ಸತ್ತ ತಾಯಿಯನ್ನು ಅನುಷಾ ಹಾಗೂ ದೇವರಾಜ್‌ ಹಾರೋಹಳ್ಳಿಯಿಂದ ಹೆಬ್ಬಕವಾಡಿಗೆ ತಂದು ಗುಟ್ಟಾಗಿ ಹೂತುಹಾಕಿದ್ದಾರೆ.

ಬಳಿಕ ಆರೇಳು ತಿಂಗಳು ಸುಮ್ಮನಿದ್ದ ಮಗಳು 2023ರ ಜೂನ್‌ ತಿಂಗಳಿನಲ್ಲಿ ತನ್ನ ತಾಯಿ ಕಾಣೆಯಾಗಿರುವುದರ ಬಗ್ಗೆ ವರುಣಾ ಪೊಲೀಸ್‌ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾಳೆ. ಇಷ್ಟು ದಿನಗಳ ಕಾಲ ಹುಡುಕಿದರೂ ಪ್ರಯೋಜನೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಅನುಮಾನಗೊಂಡು ಮಗಳು ಹಾಗೂ ಅಳಿಯನನ್ನು ವಿಚಾರಣೆ ನಡೆಸಿದಾಗ ನಡೆದ ಘಟನೆ ಬೆಳಕಿಗೆ ಬಂದಿದೆ. ನಂತರ ಪ್ರಕರಣವನ್ನು ಮಂಡ್ಯ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿದ್ದು, ಆರೋಪಿಗಳು ಶವ ಹೂತಿಟ್ಟ ಜಾಗವನ್ನು ತೋರಿಸಿದ್ದು ಮೃತದೇಹಕ್ಕಾಗಿ ಶೋಧ ಕಾರ್ಯ ಆರಂಭಗೊಂಡಿದೆ.

andolana

Recent Posts

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

2 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

2 hours ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

2 hours ago

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…

2 hours ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

13 hours ago