ಜಿಲ್ಲೆಗಳು

ಗಂಡನ ಜೊತೆ ಸೇರಿ ತಾಯಿಯನ್ನೇ ಕೊಲೆಗೈದಳಾ ಮಗಳು?

ಗಂಡನ ಜತೆ ಸೇರಿ ತಾಯಿಯನ್ನೇ ಕೊಲೆ ಮಾಡಿ ರಾತ್ರೋರಾತ್ರಿ ಶವ ಹೂತಿಟ್ಟ ಘಟನೆ ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಾರದಮ್ಮ(50) ಮೃತ ಮಹಿಳೆ. ಶಾರದಮ್ಮ ತಮ್ಮ ಮಗಳು ಅನುಷಾಳನ್ನು ಮೈಸೂರಿನ ಹಾರೋಹಳ್ಳಿಯ ದೇವರಾಜ್‌ ಎಂಬಾತನಿಗೆ ಮದುವೆ ಮಾಡಿದ್ದರು.

ಒಬ್ಬಳೇ ಮಗಳಾದ ಕಾರಣ ಶಾರದಮ್ಮ ಆಗಾಗ ಅಳಿಯನ ಮನೆಗೆ ತೆರಳಿ ಮಗಳ ಯೋಗಕ್ಷೇಮ ವಿಚಾರಿಸಿಕೊಂಡು ಬರುತ್ತಿದ್ದರು. ಹೀಗೆ ನವೆಂಬರ್‌ 2022ರಲ್ಲಿ ಮಗಳ ಮನೆಗೆ ತೆರಳಿದ್ದ ಶಾರದಮ್ಮ ಜಗಳದಲ್ಲಿ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಮಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಹೀಗೆ ಹಾರೋಹಳ್ಳಿಯಲ್ಲಿ ಸತ್ತ ತಾಯಿಯನ್ನು ಅನುಷಾ ಹಾಗೂ ದೇವರಾಜ್‌ ಹಾರೋಹಳ್ಳಿಯಿಂದ ಹೆಬ್ಬಕವಾಡಿಗೆ ತಂದು ಗುಟ್ಟಾಗಿ ಹೂತುಹಾಕಿದ್ದಾರೆ.

ಬಳಿಕ ಆರೇಳು ತಿಂಗಳು ಸುಮ್ಮನಿದ್ದ ಮಗಳು 2023ರ ಜೂನ್‌ ತಿಂಗಳಿನಲ್ಲಿ ತನ್ನ ತಾಯಿ ಕಾಣೆಯಾಗಿರುವುದರ ಬಗ್ಗೆ ವರುಣಾ ಪೊಲೀಸ್‌ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾಳೆ. ಇಷ್ಟು ದಿನಗಳ ಕಾಲ ಹುಡುಕಿದರೂ ಪ್ರಯೋಜನೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಅನುಮಾನಗೊಂಡು ಮಗಳು ಹಾಗೂ ಅಳಿಯನನ್ನು ವಿಚಾರಣೆ ನಡೆಸಿದಾಗ ನಡೆದ ಘಟನೆ ಬೆಳಕಿಗೆ ಬಂದಿದೆ. ನಂತರ ಪ್ರಕರಣವನ್ನು ಮಂಡ್ಯ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿದ್ದು, ಆರೋಪಿಗಳು ಶವ ಹೂತಿಟ್ಟ ಜಾಗವನ್ನು ತೋರಿಸಿದ್ದು ಮೃತದೇಹಕ್ಕಾಗಿ ಶೋಧ ಕಾರ್ಯ ಆರಂಭಗೊಂಡಿದೆ.

andolana

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

36 mins ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

38 mins ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

41 mins ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

43 mins ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

55 mins ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

59 mins ago