ಜಿಲ್ಲೆಗಳು

ವಿಶ್ವವಿದ್ಯಾಲಯ ಜಾಗತಿಕ ರ‍್ಯಾಂಕಿಂಗ್

ಮೈಸೂರು ವಿವಿಗೆ 110ನೇ ಸ್ಥಾನ

ಮೈಸೂರು: ಜಾಗತಿಕ ಮಟ್ಟದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿರುವ ವಿಶ್ವವಿದ್ಯಾಲಯಗಳ ಮೌಲ್ಯಮಾಪನ ನಡೆಸಿ, ಗುಣಮಟ್ಟವನ್ನು ಶ್ರೇಣೀಕರಿಸುವ ಸ್ವತಂತ್ರ ಸಂಸ್ಥೆಯಾದ ‘ಕ್ವಕ್‌ವಾರೆಲಿ ಸೈಮಂಡ್ಸ್ (ಕ್ಯು.ಎಸ್.) ಇತ್ತೀಚೆಗೆ ಪ್ರಕಟಿಸಿರುವ ವಿಶ್ವ ವಿಶ್ವವಿದ್ಯಾಲಯ ರ‍್ಯಾಂಕಿಂಗ್ ನಲ್ಲಿ ಮೈಸೂರು ವಿಶ್ವವಿದ್ಯಾಲಯವು 110ನೇ ಸ್ಥಾನ ಪಡೆದಿದೆ ಎಂದು ಪ್ರಭಾರ ಕುಲಪತಿ ಪ್ರೊ.ಎಚ್.ರಾಜಶೇಖರ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಆರು ಪ್ರಮುಖ ಅಂಶಗಳನ್ನಾಧರಿಸಿ ಕ್ಯೂ.ಎಸ್. ಸಂಸ್ಥೆಯು ಪ್ರತಿ ವರ್ಷವೂ ಜಾಗತಿಕವಾಗಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ರ‍್ಯಾಂಕಿಂಗ್ ನೀಡುತ್ತದೆ. ಶೈಕ್ಷಣಿಕ ಸಹವರ್ತಿಗಳ ವಿಮರ್ಶೆ, ಅಧ್ಯಾಪಕ ವಿದ್ಯಾರ್ಥಿ ಅನುಪಾತ, ಸಂಶೋಧನಾ ಉಲ್ಲೇಖ, ಉದ್ಯೋಗದಾತರು ಹೊಂದಿರುವ ಅಭಿಪ್ರಾಯ, ವಿದೇಶಿ ವಿದ್ಯಾರ್ಥಿಗಳ ಅನುಪಾತ ಹಾಗೂ ವಿದೇಶಿ ಅಧ್ಯಾಪಕರ ಅನುಪಾತ ಅಂಶಗಳನ್ನು ಪರಿಗಣಿಸಲಾಗಿದೆ.

ಮೈಸೂರು ವಿ.ವಿ.ಯು ಬೋಧನೆ, ಸಂಶೋಧನೆ ಹಾಗೂ ಉದ್ಯೋಗ ಸೃಷ್ಟಿಯು ಆಯಾಮಗಳಲ್ಲಿ ಉತ್ತಮ ಸಾಧನೆ ವಾಡಿ ಶ್ರೇಣಿಯನ್ನು ಪಡೆದಿದೆ ಎಂದಿದ್ದಾರೆ.

ಕಾರ್ಯ ಅಧ್ಯಾಪಕರ ಕೊರತೆ ಹಾಗೂ ಇನ್ನಿತರ ಮಿತಿಗಳ ನಡುವೆಯೂ ವಿ.ವಿಯು 110ನೇ ಸ್ಥಾನ ಗಳಿಸಿರುವುದು ಅಭಿಮಾನದ ಸಂಗತಿಯಾಗಿದೆ ಪ್ರೊ.ರಾಜಶೇಖರ್ ತಿಳಿಸಿದ್ದಾರೆ.

andolana

Recent Posts

ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ : ಆರೋಪಿ ಬಂಧನಕ್ಕೆ ದಸಂಸ ಆಗ್ರಹ

ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…

4 mins ago

ಉತ್ತಮ ಕೃಷಿಗೆ ಜೈವಿಕ ಗೊಬ್ಬರ ಬಳಸಿ : ತೋಟಗಾರಿಕೆ ವಿ.ವಿ ಕುಲಪತಿ ವಿಷ್ಣವರ್ಧನ ಸಲಹೆ

ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ…

10 mins ago

ರಂಗಭೂಮಿ ಧರ್ಮಾತೀತ,ಜಾತ್ಯತೀತವಾದದ್ದು : ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣನೆ

ಮೈಸೂರು : ರಂಗಭೂಮಿ ಎಂಬುದು ಧರ್ಮಾತೀತ, ಜಾತ್ಯತೀತ ಅಲ್ಲದೇ ದೇಶಾತೀತ ಎಂದು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣಿಸಿದರು. ನಗರದ ಜೆಎಲ್‌ಬಿ…

40 mins ago

ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ : ರಘುನಾಥ್‌ ಚ.ಹ, ಪ್ರಕಾಶ್‌ರಾಜ್‌ ಕೃತಿ ಆಯ್ಕೆ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…

2 hours ago

ಕೊಲೆ ಪ್ರಕರಣ | ಪವಿತ್ರಾ ಗೌಡಗೆ ಕೊನೆಗೂ ಸಿಕ್ತು ಗುಡ್‌ ನ್ಯೂಸ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…

2 hours ago

ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ : ತಂದೆ ನೆನೆದು ಸಚಿವ ಖಂಡ್ರೆ ಭಾವುಕ

ಬೀದರ್:‌ ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ…

3 hours ago