ಜಿಲ್ಲೆಗಳು

ವಿಶ್ವವಿದ್ಯಾಲಯ ಜಾಗತಿಕ ರ‍್ಯಾಂಕಿಂಗ್

ಮೈಸೂರು ವಿವಿಗೆ 110ನೇ ಸ್ಥಾನ

ಮೈಸೂರು: ಜಾಗತಿಕ ಮಟ್ಟದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿರುವ ವಿಶ್ವವಿದ್ಯಾಲಯಗಳ ಮೌಲ್ಯಮಾಪನ ನಡೆಸಿ, ಗುಣಮಟ್ಟವನ್ನು ಶ್ರೇಣೀಕರಿಸುವ ಸ್ವತಂತ್ರ ಸಂಸ್ಥೆಯಾದ ‘ಕ್ವಕ್‌ವಾರೆಲಿ ಸೈಮಂಡ್ಸ್ (ಕ್ಯು.ಎಸ್.) ಇತ್ತೀಚೆಗೆ ಪ್ರಕಟಿಸಿರುವ ವಿಶ್ವ ವಿಶ್ವವಿದ್ಯಾಲಯ ರ‍್ಯಾಂಕಿಂಗ್ ನಲ್ಲಿ ಮೈಸೂರು ವಿಶ್ವವಿದ್ಯಾಲಯವು 110ನೇ ಸ್ಥಾನ ಪಡೆದಿದೆ ಎಂದು ಪ್ರಭಾರ ಕುಲಪತಿ ಪ್ರೊ.ಎಚ್.ರಾಜಶೇಖರ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಆರು ಪ್ರಮುಖ ಅಂಶಗಳನ್ನಾಧರಿಸಿ ಕ್ಯೂ.ಎಸ್. ಸಂಸ್ಥೆಯು ಪ್ರತಿ ವರ್ಷವೂ ಜಾಗತಿಕವಾಗಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ರ‍್ಯಾಂಕಿಂಗ್ ನೀಡುತ್ತದೆ. ಶೈಕ್ಷಣಿಕ ಸಹವರ್ತಿಗಳ ವಿಮರ್ಶೆ, ಅಧ್ಯಾಪಕ ವಿದ್ಯಾರ್ಥಿ ಅನುಪಾತ, ಸಂಶೋಧನಾ ಉಲ್ಲೇಖ, ಉದ್ಯೋಗದಾತರು ಹೊಂದಿರುವ ಅಭಿಪ್ರಾಯ, ವಿದೇಶಿ ವಿದ್ಯಾರ್ಥಿಗಳ ಅನುಪಾತ ಹಾಗೂ ವಿದೇಶಿ ಅಧ್ಯಾಪಕರ ಅನುಪಾತ ಅಂಶಗಳನ್ನು ಪರಿಗಣಿಸಲಾಗಿದೆ.

ಮೈಸೂರು ವಿ.ವಿ.ಯು ಬೋಧನೆ, ಸಂಶೋಧನೆ ಹಾಗೂ ಉದ್ಯೋಗ ಸೃಷ್ಟಿಯು ಆಯಾಮಗಳಲ್ಲಿ ಉತ್ತಮ ಸಾಧನೆ ವಾಡಿ ಶ್ರೇಣಿಯನ್ನು ಪಡೆದಿದೆ ಎಂದಿದ್ದಾರೆ.

ಕಾರ್ಯ ಅಧ್ಯಾಪಕರ ಕೊರತೆ ಹಾಗೂ ಇನ್ನಿತರ ಮಿತಿಗಳ ನಡುವೆಯೂ ವಿ.ವಿಯು 110ನೇ ಸ್ಥಾನ ಗಳಿಸಿರುವುದು ಅಭಿಮಾನದ ಸಂಗತಿಯಾಗಿದೆ ಪ್ರೊ.ರಾಜಶೇಖರ್ ತಿಳಿಸಿದ್ದಾರೆ.

andolana

Recent Posts

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

6 mins ago

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ…

42 mins ago

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

2 hours ago

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

2 hours ago

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

4 hours ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

4 hours ago