ಜಿಲ್ಲೆಗಳು

ವಿಶ್ವವಿದ್ಯಾಲಯ ಜಾಗತಿಕ ರ‍್ಯಾಂಕಿಂಗ್

ಮೈಸೂರು ವಿವಿಗೆ 110ನೇ ಸ್ಥಾನ

ಮೈಸೂರು: ಜಾಗತಿಕ ಮಟ್ಟದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿರುವ ವಿಶ್ವವಿದ್ಯಾಲಯಗಳ ಮೌಲ್ಯಮಾಪನ ನಡೆಸಿ, ಗುಣಮಟ್ಟವನ್ನು ಶ್ರೇಣೀಕರಿಸುವ ಸ್ವತಂತ್ರ ಸಂಸ್ಥೆಯಾದ ‘ಕ್ವಕ್‌ವಾರೆಲಿ ಸೈಮಂಡ್ಸ್ (ಕ್ಯು.ಎಸ್.) ಇತ್ತೀಚೆಗೆ ಪ್ರಕಟಿಸಿರುವ ವಿಶ್ವ ವಿಶ್ವವಿದ್ಯಾಲಯ ರ‍್ಯಾಂಕಿಂಗ್ ನಲ್ಲಿ ಮೈಸೂರು ವಿಶ್ವವಿದ್ಯಾಲಯವು 110ನೇ ಸ್ಥಾನ ಪಡೆದಿದೆ ಎಂದು ಪ್ರಭಾರ ಕುಲಪತಿ ಪ್ರೊ.ಎಚ್.ರಾಜಶೇಖರ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಆರು ಪ್ರಮುಖ ಅಂಶಗಳನ್ನಾಧರಿಸಿ ಕ್ಯೂ.ಎಸ್. ಸಂಸ್ಥೆಯು ಪ್ರತಿ ವರ್ಷವೂ ಜಾಗತಿಕವಾಗಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ರ‍್ಯಾಂಕಿಂಗ್ ನೀಡುತ್ತದೆ. ಶೈಕ್ಷಣಿಕ ಸಹವರ್ತಿಗಳ ವಿಮರ್ಶೆ, ಅಧ್ಯಾಪಕ ವಿದ್ಯಾರ್ಥಿ ಅನುಪಾತ, ಸಂಶೋಧನಾ ಉಲ್ಲೇಖ, ಉದ್ಯೋಗದಾತರು ಹೊಂದಿರುವ ಅಭಿಪ್ರಾಯ, ವಿದೇಶಿ ವಿದ್ಯಾರ್ಥಿಗಳ ಅನುಪಾತ ಹಾಗೂ ವಿದೇಶಿ ಅಧ್ಯಾಪಕರ ಅನುಪಾತ ಅಂಶಗಳನ್ನು ಪರಿಗಣಿಸಲಾಗಿದೆ.

ಮೈಸೂರು ವಿ.ವಿ.ಯು ಬೋಧನೆ, ಸಂಶೋಧನೆ ಹಾಗೂ ಉದ್ಯೋಗ ಸೃಷ್ಟಿಯು ಆಯಾಮಗಳಲ್ಲಿ ಉತ್ತಮ ಸಾಧನೆ ವಾಡಿ ಶ್ರೇಣಿಯನ್ನು ಪಡೆದಿದೆ ಎಂದಿದ್ದಾರೆ.

ಕಾರ್ಯ ಅಧ್ಯಾಪಕರ ಕೊರತೆ ಹಾಗೂ ಇನ್ನಿತರ ಮಿತಿಗಳ ನಡುವೆಯೂ ವಿ.ವಿಯು 110ನೇ ಸ್ಥಾನ ಗಳಿಸಿರುವುದು ಅಭಿಮಾನದ ಸಂಗತಿಯಾಗಿದೆ ಪ್ರೊ.ರಾಜಶೇಖರ್ ತಿಳಿಸಿದ್ದಾರೆ.

andolana

Recent Posts

ಹನೂರು: ಕಾಡಾನೆ ದಾಳಿಗೆ ಸಿಲುಕಿ ರೈತನ ಕಾಲು ಮುರಿತ

ಮಹಾದೇಶ್‌ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ…

2 hours ago

ಮೊದಲು ನಮ್ಮ ಕನ್ನಡಿಗರಿಗೆ ನಿವೇಶನ ಸಿಗಬೇಕು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ…

2 hours ago

ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ…

2 hours ago

ಅರಣ್ಯ ಪ್ರದೇಶದ ಹೊರಗಡೆ ವನ್ಯಜೀವಿಗಳು ಕಂಡರೆ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ…

2 hours ago

ಮೈಸೂರು ವಿವಿ 106ನೇ ಘಟಿಕೋತ್ಸವ ಸಂಭ್ರಮ: 30,966 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವವು ಕ್ರಾಪರ್ಡ್‌ ಹಾಲ್‌ನಲ್ಲಿ ನೆರವೇರಿತು. ಈ ಬಾರಿಯ ಘಟಿಕೋತ್ಸವದಲ್ಲಿ 30,966 ಅಭ್ಯರ್ಥಿಗಳಿಗೆ ವಿವಿಧ…

3 hours ago

ಬಳ್ಳಾರಿ ಗಲಾಟೆ ಪ್ರಕರಣ: ಮೃತ ರಾಜಶೇಖರ್‌ಗೆ 2 ಬಾರಿ ಮರಣೋತ್ತರ ಪರೀಕ್ಷೆ ಯಾಕೆ?: ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್‌ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು…

3 hours ago