ಜಿಲ್ಲೆಗಳು

ತಪ್ಪು ಸ್ಕ್ಯಾನಿಂಗ್‌ ವರದಿಯಿಂದ ಬುದ್ದಿಮಾಂದ್ಯ ಶಿಶು ಜನನ: ಡಯಾಗ್ನೋಸ್ಟಿಕ್ ಕೇಂದ್ರಕ್ಕೆ ರೂ.15 ಲಕ್ಷ ದಂಡ

ಮಂಡ್ಯ: ಡಯಾಗ್ನೋಸ್ಟಿಕ್ ಕೇಂದ್ರವು ತಪ್ಪು ಸ್ಕ್ಯಾನಿಂಗ್ ವರದಿಯನ್ನು ನೀಡಿ, ಮಗುವಿನ ಅಸಹಜ ಬೆಳವಣಿಗೆಗೆ ಕಾರಣವಾಗಿದೆ. ಇದೀಗ ಅಸಹಜ ಬೆಳವಣಿಗೆ ಹೊಂದಿದ ಮಗುವಿನ ಜನನಕ್ಕೆ ಕಾರಣವಾದ ಮದ್ದೂರಿನ ಡಿ-2 ಡಯಾಗ್ನೋಸ್ಟಿಕ್ ಕೇಂದ್ರಕ್ಕೆ 15 ಲಕ್ಷ ರೂಪಾಯಿ ದಂಡ ವಿಧಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಆದೇಶ ನೀಡಿದೆ.

ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ಸಿಂಧೂಶ್ರೀ ಎಂಬ ಗರ್ಭಿಣಿಯು ವೈದ್ಯರ ಸಲಹೆಯಂತೆ, 20ನೇ ವಾರದ ಸ್ಕ್ಯಾನಿಂಗ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಅವರು ಮದ್ದೂರಿನ ಸಾರಿಗೆ ಬಸ್ ನಿಲ್ದಾಣದ ಬಳಿ ಇರುವ ಡಿ2 ಡಯಾಗ್ನೋಸ್ಟಿಕ್ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಭ್ರೂಣದ ಅಸಹಜ ಬೆಳವಣಿಗೆ ಪತ್ತೆ ಹಚ್ಚದೇ ತಪ್ಪು ಸ್ಕ್ಯಾನಿಂಗ್ ವರದಿ ನೀಡಲಾಗಿದೆ. ಇತ್ತ ಸ್ಕ್ಯಾನಿಂಗ್ ವರದಿ ಆಧರಿಸಿ ಸಿಂಧೂಶ್ರೀಗೆ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದರು.

ಆದರೆ, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಸಿಂಧುಶ್ರೀಗೆ ಹೆರಿಗೆಯಾದಾಗ ಅಸಹಜವಾಗಿ ಬೆಳವಣಿಗೆ ಹೊಂದಿರುವ ಮಗು ಹುಟ್ಟಿದೆ. ಇದರಿಂದ ಪೋಷಕರು ಕಂಗಾಲಾಗಿದ್ದು, ಆ ಸಮಯದಲ್ಲಿ ವೈದ್ಯರು ಸ್ಕ್ಯಾನಿಂಗ್ ಪರೀಕ್ಷೆ ಸಮಯದಲ್ಲೇ ನೋಡಿಕೊಳ್ಳಲಿಲ್ಲ ಏಕೆ ಎಂದು ಪೋಷಕರನ್ನು ಪ್ರಶ್ನಿಸಿದ್ದಾರೆ. ಹೀಗೆ ತಪ್ಪು ಸ್ಕ್ಯಾನಿಂಗ್ ವರದಿ ನೀಡಿರುವ ಘಟನೆ ನಂತರ ತಿಳಿದುಬಂದಿದೆ. ಪೋಷಕರು ಆರೋಗ್ಯವಂತ ಮಗುವನ್ನು ಪಡೆಯಲು ಆಗಲಿಲ್ಲ.

 

andolanait

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

4 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

4 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

4 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

4 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

5 hours ago