ಜಿಲ್ಲೆಗಳು

ತಪ್ಪು ಸ್ಕ್ಯಾನಿಂಗ್‌ ವರದಿಯಿಂದ ಬುದ್ದಿಮಾಂದ್ಯ ಶಿಶು ಜನನ: ಡಯಾಗ್ನೋಸ್ಟಿಕ್ ಕೇಂದ್ರಕ್ಕೆ ರೂ.15 ಲಕ್ಷ ದಂಡ

ಮಂಡ್ಯ: ಡಯಾಗ್ನೋಸ್ಟಿಕ್ ಕೇಂದ್ರವು ತಪ್ಪು ಸ್ಕ್ಯಾನಿಂಗ್ ವರದಿಯನ್ನು ನೀಡಿ, ಮಗುವಿನ ಅಸಹಜ ಬೆಳವಣಿಗೆಗೆ ಕಾರಣವಾಗಿದೆ. ಇದೀಗ ಅಸಹಜ ಬೆಳವಣಿಗೆ ಹೊಂದಿದ ಮಗುವಿನ ಜನನಕ್ಕೆ ಕಾರಣವಾದ ಮದ್ದೂರಿನ ಡಿ-2 ಡಯಾಗ್ನೋಸ್ಟಿಕ್ ಕೇಂದ್ರಕ್ಕೆ 15 ಲಕ್ಷ ರೂಪಾಯಿ ದಂಡ ವಿಧಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಆದೇಶ ನೀಡಿದೆ.

ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ಸಿಂಧೂಶ್ರೀ ಎಂಬ ಗರ್ಭಿಣಿಯು ವೈದ್ಯರ ಸಲಹೆಯಂತೆ, 20ನೇ ವಾರದ ಸ್ಕ್ಯಾನಿಂಗ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಅವರು ಮದ್ದೂರಿನ ಸಾರಿಗೆ ಬಸ್ ನಿಲ್ದಾಣದ ಬಳಿ ಇರುವ ಡಿ2 ಡಯಾಗ್ನೋಸ್ಟಿಕ್ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಭ್ರೂಣದ ಅಸಹಜ ಬೆಳವಣಿಗೆ ಪತ್ತೆ ಹಚ್ಚದೇ ತಪ್ಪು ಸ್ಕ್ಯಾನಿಂಗ್ ವರದಿ ನೀಡಲಾಗಿದೆ. ಇತ್ತ ಸ್ಕ್ಯಾನಿಂಗ್ ವರದಿ ಆಧರಿಸಿ ಸಿಂಧೂಶ್ರೀಗೆ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದರು.

ಆದರೆ, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಸಿಂಧುಶ್ರೀಗೆ ಹೆರಿಗೆಯಾದಾಗ ಅಸಹಜವಾಗಿ ಬೆಳವಣಿಗೆ ಹೊಂದಿರುವ ಮಗು ಹುಟ್ಟಿದೆ. ಇದರಿಂದ ಪೋಷಕರು ಕಂಗಾಲಾಗಿದ್ದು, ಆ ಸಮಯದಲ್ಲಿ ವೈದ್ಯರು ಸ್ಕ್ಯಾನಿಂಗ್ ಪರೀಕ್ಷೆ ಸಮಯದಲ್ಲೇ ನೋಡಿಕೊಳ್ಳಲಿಲ್ಲ ಏಕೆ ಎಂದು ಪೋಷಕರನ್ನು ಪ್ರಶ್ನಿಸಿದ್ದಾರೆ. ಹೀಗೆ ತಪ್ಪು ಸ್ಕ್ಯಾನಿಂಗ್ ವರದಿ ನೀಡಿರುವ ಘಟನೆ ನಂತರ ತಿಳಿದುಬಂದಿದೆ. ಪೋಷಕರು ಆರೋಗ್ಯವಂತ ಮಗುವನ್ನು ಪಡೆಯಲು ಆಗಲಿಲ್ಲ.

 

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago