ಮಂಡ್ಯ: ಡಯಾಗ್ನೋಸ್ಟಿಕ್ ಕೇಂದ್ರವು ತಪ್ಪು ಸ್ಕ್ಯಾನಿಂಗ್ ವರದಿಯನ್ನು ನೀಡಿ, ಮಗುವಿನ ಅಸಹಜ ಬೆಳವಣಿಗೆಗೆ ಕಾರಣವಾಗಿದೆ. ಇದೀಗ ಅಸಹಜ ಬೆಳವಣಿಗೆ ಹೊಂದಿದ ಮಗುವಿನ ಜನನಕ್ಕೆ ಕಾರಣವಾದ ಮದ್ದೂರಿನ ಡಿ-2 ಡಯಾಗ್ನೋಸ್ಟಿಕ್ ಕೇಂದ್ರಕ್ಕೆ 15 ಲಕ್ಷ ರೂಪಾಯಿ ದಂಡ ವಿಧಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಆದೇಶ ನೀಡಿದೆ.
ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ಸಿಂಧೂಶ್ರೀ ಎಂಬ ಗರ್ಭಿಣಿಯು ವೈದ್ಯರ ಸಲಹೆಯಂತೆ, 20ನೇ ವಾರದ ಸ್ಕ್ಯಾನಿಂಗ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಅವರು ಮದ್ದೂರಿನ ಸಾರಿಗೆ ಬಸ್ ನಿಲ್ದಾಣದ ಬಳಿ ಇರುವ ಡಿ2 ಡಯಾಗ್ನೋಸ್ಟಿಕ್ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಭ್ರೂಣದ ಅಸಹಜ ಬೆಳವಣಿಗೆ ಪತ್ತೆ ಹಚ್ಚದೇ ತಪ್ಪು ಸ್ಕ್ಯಾನಿಂಗ್ ವರದಿ ನೀಡಲಾಗಿದೆ. ಇತ್ತ ಸ್ಕ್ಯಾನಿಂಗ್ ವರದಿ ಆಧರಿಸಿ ಸಿಂಧೂಶ್ರೀಗೆ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದರು.
ಆದರೆ, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಸಿಂಧುಶ್ರೀಗೆ ಹೆರಿಗೆಯಾದಾಗ ಅಸಹಜವಾಗಿ ಬೆಳವಣಿಗೆ ಹೊಂದಿರುವ ಮಗು ಹುಟ್ಟಿದೆ. ಇದರಿಂದ ಪೋಷಕರು ಕಂಗಾಲಾಗಿದ್ದು, ಆ ಸಮಯದಲ್ಲಿ ವೈದ್ಯರು ಸ್ಕ್ಯಾನಿಂಗ್ ಪರೀಕ್ಷೆ ಸಮಯದಲ್ಲೇ ನೋಡಿಕೊಳ್ಳಲಿಲ್ಲ ಏಕೆ ಎಂದು ಪೋಷಕರನ್ನು ಪ್ರಶ್ನಿಸಿದ್ದಾರೆ. ಹೀಗೆ ತಪ್ಪು ಸ್ಕ್ಯಾನಿಂಗ್ ವರದಿ ನೀಡಿರುವ ಘಟನೆ ನಂತರ ತಿಳಿದುಬಂದಿದೆ. ಪೋಷಕರು ಆರೋಗ್ಯವಂತ ಮಗುವನ್ನು ಪಡೆಯಲು ಆಗಲಿಲ್ಲ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…