ಹನೂರು: ತಾಲ್ಲೂಕಿನ ಹೊಸದೊಡ್ಡಿ ಗ್ರಾಮ ಸಮೀಪದ ಎಡೆಯರಹಳ್ಳಿ ಕ್ರಾಸ್ ನಲ್ಲಿ ವಾಹನ ಸವಾರರಿಗೆ ಭಾನುವಾರ ತಡರಾತ್ರಿ ಹುಲಿಯೊಂದು ಪ್ರತ್ಯಕ್ಷವಾಗಿರುವುದು ಪರಿಸರ ಪ್ರೇಮಿಗಳಿಗೆ ಸಂತಸ ವನ್ನುಂಟುಮಾಡಿದರೆ, ರೈತರಲ್ಲಿ ನಡುಕ ಪ್ರಾರಂಭವಾಗಿದೆ.
ತಾಲ್ಲೂಕು ಬಿಆರ್ ಟಿ ಅರಣ್ಯ ಪ್ರದೇಶದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಹುಲಿಗಳು ಹುಲಿ ಗಣತಿ ಯಲ್ಲಿ ಕಾಣಿಸಿಕೊಂಡಿದೆ. ಇನ್ನೂ ಬಿಆರ್ ಟಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ 18 ಕ್ಕೂ ಹೆಚ್ಚು ಹುಲಿಗಳು ತನ್ನ ಸಂತತಿಯನ್ನು ವೃದ್ಧಿಸಿಕೊಂಡಿದೆ . ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳು ಮಲೆಮಹದೇಶ್ವರ ವನ್ಯಧಾಮದ ಅಂಚಿನಲ್ಲಿವೆ. ಆಗೊಮ್ಮೆ ಈಗೊಮ್ಮೆ ಹುಲಿ ಕಾಣಿಸಿಕೊಳ್ಳುತ್ತಿತ್ತು. ಆದರೆ ಕಳೆದ 1ವಾರದಿಂದ ಹುಲಿಯೊಂದು ಸ್ಥಳೀಯರಿಗೆ ಹಾಗೂ ವಾಹನ ಸವಾರರಿಗೆ ಪದೇಪದೆ ದರ್ಶನ ನೀಡುತ್ತಿರುವುದು ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ.
ಕಳೆದ ಒಂದು ವಾರದಿಂದ ಹುಲಿ ಪ್ರತ್ಯಕ್ಷವಾಗುತ್ತಿರುವುದರಿಂದ ರೈತರಲ್ಲಿ ಆತಂಕ ಪ್ರಾರಂಭವಾಗಿದೆ.ಭಯದಿಂದ ಜಮೀನಿನ ಕಾವಲಿಗೆ ತೆರಳಲು ಹಿಂಜರಿಯುತ್ತಿದ್ದಾರೆ . ಆದ್ದರಿಂದ ಸಂಬಂಧ ಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಆನೆ ಕಾರಿಡಾರ್ ಹಾಗೂ ಸೋಲಾರ್ ವ್ಯವಸ್ಥೆ ಮಾಡಿಕೊಡುವಂತೆ ಪರಿವರ್ತನಾ ಗ್ರಾಮ ಸಮಿತಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…