Mysore
21
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಯಳಂದೂರು: ಆಕಸ್ಮಿಕ ಬೆಂಕಿ ತಗುಲಿ ಕೊಟ್ಟಿಗೆ ಭಸ್ಮ,ಎರಡು ಎತ್ತುಗಳು ಸಜೀವ ದಹನ

ಯಳಂದೂರು :  ತಾಲ್ಲೂಕಿನ ವೈ. ಕೆ.ಮೊಳೆ ಗ್ರಾಮದ ಸಿದ್ದ ಎಂಬುವವರಿಗೆ ಸೇರಿದ ಕೊಟ್ಟಿಗೆ ಹಾಗೂ ಎರಡು ಎತ್ತುಗಳು ಮಧ್ಯ ರಾತ್ರಿಯಲ್ಲಿ ಬೆಂಕಿ ಬಿದ್ದು ಸಂಪೂರ್ಣ ಸುಟ್ಟುಹೋಗಿರುವ ಘಟನೆ ನಡೆದಿದೆ.ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರು ಸಹ ವಿಫಲವಾಗಿದೆ. ನಂತರ ಅಗ್ನಿ ಶಾಮಕ ದಳ ಹಾಗೂ ಠಾಣೆಗೆ ಮಾಹಿತಿ ನೀಡಿದರು.
ವೈ ಕೆ ಮೋಳೆ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೆಂಪರಾಜು ಮಾತನಾಡಿ ಸಿದ್ದ ಎಂಬುವವರಿಗೆ ಸೇರಿದ ಎತ್ತುಗಳು ಆಕಸ್ಮಿಕ ಬೆಂಕಿಗೆ ಆಹುತಿಯಾಗಿದೆ. ಬಡ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!