ಜಿಲ್ಲೆಗಳು

ಯಳಂದೂರು : ನಿಲ್ಲದ ಮಳೆ; ಸ್ಥಳೀಯರಿಂದಲೇ ಪೊಲೀಸರ ರಕ್ಷಣೆ

ಹಲವು ಗ್ರಾಮಗಳಲ್ಲಿ ರಸ್ತೆಯಲ್ಲಿ ಹರಿಯುತ್ತಿರುವ ಮಳೆ ನೀರು.

ಚಾಮರಾಜನಗರ: ರಾತ್ರಿ ಇಡೀ ಬಿಟ್ಟುಬಿಡದೇ ಸುರಿದ ಮಳೆಯಿಂದಾಗಿ ಗಡಿಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಯಳಂದೂರು ತಾಲೂಕಿನಲ್ಲಿರುವ ಮಾಂಬಳ್ಳಿ ಪೊಲೀಸ್ ಠಾಣೆಗೆ ನೀರು ನುಗ್ಗಿ ಇಡೀ ಠಾಣೆಯೇ ಜಲಾವೃತವಾಗಿದೆ. ಎಲ್ಲರನ್ನೂ ರಕ್ಷಿಸಲು ತೆರಳುವ ಪೊಲೀಸರಿಗೇ ಮಳೆಯಿಂದ ರಕ್ಷಣೆ ಸಿಗದಂತಾದ ಸ್ಥಿತಿ ನಿರ್ಮಾಣವಾಗಿದ್ದು, ಇಡೀ ಠಾಣೆ ತುಂಬೆಲ್ಲಾ 3 ರಿಂದ 4 ಅಡಿ ನೀರು ನಿಂತು ಅವಾಂತರ ಸೃಷ್ಟಿಸಿದೆ.

ಮೊಣಕಾಲುದ್ದ ನಿಂತಿರುವ ನೀರಿನಲ್ಲಿ ಪೊಲೀಸ್ ಕಾನ್​ಸ್ಟೆಬಲ್‌ ಒಬ್ಬರು ಠಾಣೆಯಲ್ಲಿ ಫಜೀತಿ ಅನುಭವಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸೋಮವಾರ ಸಂಜೆ ಮಳೆ ಹಾನಿ ಪರಿಶೀಲನೆಗೆ ಹೋಗಿ ಅಧಿಕಾರಿಗಳು ಹಳ್ಳದ ನೀರಿನಲ್ಲಿ ಸಿಲುಕಿಕೊಂಡು ಕೊನೆಗೆ ಸ್ಥಳೀಯರಿಂದ ರಕ್ಷಿಸಲ್ಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಕಣ್ಣೆಗಾಲ – ಆಲೂರು ನಡುವೆ ನಡೆದಿದೆ.ಮಳೆ ಹಾನಿ ಪರಿಶೀಲನೆ ನಡೆಸಿ ಅಧಿಕಾರಿಗಳು ಕಾರಿನಲ್ಲಿ ವಾಪಸ್ ಆಗುತ್ತಿದ್ದ ವೇಳೆ ಹಳ್ಳದ ನೀರಿನಲ್ಲಿ ಸಿಲುಕಿದ್ದಾರೆ. ಹಳ್ಳ ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿನ ಮಟ್ಟ ಹೆಚ್ಚಳವಾಗಿ ಹಳ್ಳದ ನೀರಿನಲ್ಲಿ ಅಧಿಕಾರಿಗಳು ಸಿಲುಕಿದ್ದಾರೆ. ನೀರು ರಭಸವಾಗಿ ಹರಿಯುತ್ತಿದ್ದ ಕಾರಣ ಕಾರಿನ ಮೇಲೆ ಹತ್ತಿ ನಿಂತುಕೊಂಡಿದ್ದಾರೆ.

ಸ್ಥಳೀಯರು ನೀರಿನಲ್ಲಿ ಮುಳುಗಿದ ಕಾರಿಗೆ ಹಗ್ಗ ಕಟ್ಟಿ ಎಳೆದು ಅಧಿಕಾರಿಗಳನ್ನು ರಕ್ಷಿಸಿದ್ದಾರೆ. ಎಇಇ ಕಾಂತರಾಜ್, ಎಇ ರಾಜು, ಚಾಲಕ ಮುರುಗೇಶ್ ಅವರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. ಇದರೊಟ್ಟಿಗೆ ಸುರಿಯುತ್ತಿರುವ ನಿರಂತರ ಮಳೆಗೆ ಹನೂರು ತಾಲೂಕಿನ ಗುಂಡಾಲ್ ಜಲಾಶಯ ಕೋಡಿ ಬಿದ್ದಿದೆ. ಇಂದು ಮುಂಜಾನೆಯಿಂದಲೂ ವರುಣ ಬಿಡುವು ನೀಡದೇ ಜಿಲ್ಲೆಯ ಹಲವೆಡೆ ಸುರಿಯುತ್ತಿದ್ದಾನೆ.

andolanait

Recent Posts

ದೇಶದದ್ಯಾಂತ ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…

37 seconds ago

ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…

6 mins ago

ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ : ಮಹತ್ವದ ಮಾಹಿತಿ ಕೊಟ್ಟ ಗೃಹ ಸಚಿವ ಪರಮೇಶ್ವರ

ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…

9 mins ago

ಸ್ಪೋಟ ದುರಂತ | ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಮಹದೇವಪ್ಪ ; ಬಳಿಕ ಹೇಳಿದ್ದೇನು?

ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ…

12 mins ago

ಸಿಲಿಂಡರ್‌ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…

2 hours ago

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

4 hours ago